Main News

ಸಚಿವ ಗೋಪಾಲಯ್ಯ ಹೆಸರು ಬಳಸಿ ಐಎಎಸ್‌ ಅಧಿಕಾರಿಗೆ ಬೆದರಿಕೆ ಕರೆ: ಆರೋಪಿ ಬಂಧನ

ಸಚಿವರ ಪಿಎ ಎಂದು ಹಿರಿಯ ಐಎಎಸ್‌ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಗಂಗಾಧರ್ ಎಂಬುವವರನ್ನು ಬಂಧಿಸಲಾಗಿದೆ.

ಅಬಕಾರಿ ಸಚಿವ ಗೋಪಾಲಯ್ಯನವರ ಪರ್ಸನಲ್ ಸೆಕ್ರೆಟರಿ ಎಂದು ಕರೆ ಮಾಡಿ ಗಂಗಾಧರ್ ಬೆದರಿಕೆ ಹಾಕಿದ್ದ.ಇದನ್ನು ಓದಿ –ಜ್ಯೋತಿಷ್ಯ ಹೇಳುವ ನೆಪದಲ್ಲಿ ಜ್ಯೋತಿಷಿ ಮನೆಗೆ ನುಗ್ಗಿದ ಕಳ್ಳರು : 5 ಲಕ್ಷ ರು, 400 ಗ್ರಾಂ ಚಿನ್ನ ದೋಚಿ ಪರಾರಿ

ಐಎಎಸ್‌ ಅಧಿಕಾರಿ ಮುನೀಶ್ ಮೌದ್ಗಿಲ್ ಕಾರು ಚಾಲಕನ ವರ್ಗಾವಣೆ ಸಂಬಂಧ ಕರೆ ಮಾಡಿ ಬೆದರಿಕೆ ಹಾಕಿದಾಗಿ ಪೊಲೀಸರು ತಿಳಿಸಿದ್ದಾರೆ.

ಜುಲೈ 1 ರಂದು ರಾತ್ರಿ 11 ಗಂಟೆಗೆ ಮುನೀಶ್ ಮೌದ್ಗಿಲ್‌ಗೆ ಕರೆ ಮಾಡಿದ್ದ ವ್ಯಕ್ತಿ. ಕಾರು ಚಾಲಕ ಆನಂದ್ ವರ್ಗಾವಣೆ ಮಾಡಿದ್ದಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದ . ಈ ವೇಳೆ ತಾನೂ ಅಬಕಾರಿ ಸಚಿವ ಗೋಪಾಲಯ್ಯನವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದಾನೆ. ಚಾಲಕ ಆನಂದನನ್ನು ಏಕೆ ವರ್ಗಾವಣೆ ಮಾಡಿದ್ದೀಯಾ ಎಂದು ಜೋರು ಅವಾಜ್ ಹಾಕಿದ್ದಾನೆ.

ಈ ವೇಳೆ ಇದು ಆಡಳಿತಾತ್ಮಕ ವಿಷಯ, ಇದಕ್ಕೆ ಈ ಹೊತ್ತಿನಲ್ಲಿ ಕರೆ ಮಾಡುವ ಅವಶ್ಯಕತೆ ಇಲ್ಲ ಎಂದಿದ್ದ ಮುನೀಶ್ ಮೌದ್ಗಿಲ್ ಈ ವೇಳೆ ಏರು ಧ್ವನಿಯಲ್ಲಿ ಮಾತನಾಡಿದ್ದ.ಅಂಜನಿ ಪುತ್ರ ಆಂಜನೇಯನ ಶ್ರದ್ದಾ ಭಕ್ತಿಯೇ ಪ್ರೇರಣಾ ಶಕ್ತಿ

ಮರು ದಿನ ಟ್ರೂ ಕಾಲರ್‌ನಲ್ಲಿ ಪೋನ್ ನಂಬರ್ ಪರಿಶೀಲನೆ ನಡೆಸಿದ ಐಎಎಸ್‌ ಅಧಿಕಾರಿ ಮುನೀಶ್ ಮೌದ್ಗಿಲ್ ರಾತ್ರಿ ಹೇಳಿದ್ದ ಹೆಸರು ಮತ್ತೆ ಟ್ರೂ ಕಾಲರ್ ಹೆಸರು ಬೇರೆ ಬೇರೆ ತೋರಿಸಿದೆ. ಟ್ರೂ ಕಾಲರ್ ನಲ್ಲಿ ಗೋವಿಂದರಾಜು ಟಿ ಎಂದು ಹೆಸರು ಪತ್ತೆಯಾಗಿದೆ. ಬಳಿಕ ಅಬಕಾರಿ ಸಚಿವರ ಪಿಎ ರಾಮೇಗೌಡ ಅವರಿಗೆ ವಿಷಯ ತಿಳಿಸಿದ ಮುನೀಶ್ ಮೌದ್ಗಿಲ್ ಅವರಿಂದ ಮಾಹಿತಿಯನ್ನು ಪಡೆದಿದ್ದಾರೆ. ರಾಮೇಗೌಡ ಈ ವೇಳೆ ಸಚಿವರ ಪಿಎ ಎಂದು ಯಾರೋ ಕರೆ ಮಾಡಿದ್ದಾರೆ ಆ ವ್ಯಕ್ತಿ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ತನಗೆ ತಡರಾತ್ರಿ ಕರೆಯನ್ನು ಮಾಡಿ ಬೆದರಿಕೆಯನ್ನು ಹಾಕಿದ್ದು ಗೋಪಾಲಯ್ಯರವರ ಪಿಎ ಅಲ್ಲ ಅನ್ನೋದು ತಿಳಿಯುತ್ತಿದ್ದಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮುನೀಶ್ ಮೌದ್ಗಿಲ್ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಬಳಿಕ ಸಂಪಿಗೆ ಹಳ್ಳಿ ಪೊಲೀಸರು ಆರೋಪಿ ಗೋವಿಂದರಾಜುನನ್ನು ಬಂಧಿಸಿದ್ದಾರೆ.

Team Newsnap
Leave a Comment

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024