ಬಿಜೆಪಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣನನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ ವಿರುದ್ಧ ಕೊಲೆ ಸಂಚು ರೂಪಿಸಿದ ಆರೋಪ ಈಗ ಕೇಳಿಬಂದಿದೆ.
ಕೊಲೆಗೆ ಸಂಚು ರೂಪಿಸಿ ಮಾತನಾಡಿದ್ದಾರೆ ಎನ್ನಲಾಗಿರುವ ವಿಡಿಯೋ ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದೆಯಂತೆ ಈ ಹಿನ್ನೆಲೆಯಲ್ಲಿ ಗೋಪಾಲಕೃಷ್ಣ ಅವರನ್ನ ವಶಕ್ಕೆ ಪಡೆದು ನಿನ್ನೆ ತಡರಾತ್ರಿವರೆಗೂ ತನಿಖೆ ನಡೆಸಲಾಗಿದೆ.
ವಿಶ್ವನಾಥ್ ಬೆಂಬಲಿಗನೇ ಬಂಧನ :
ತನಿಖೆ ವೇಳೆ ವಿಶ್ವನಾಥ್ ಬೆಂಬಲಿಗ ದೇವರಾಜ್ ಅಲಿಯಾಸ್ ಕುಳ್ಳದೇವರಾಜ್ ಎಂಬಾತನನ್ನೂ ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.
ಈ ಕುಳ್ಳದೇವರಾಜ್, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ, ಎಸ್.ಆರ್. ವಿಶ್ವನಾಥ್ ಬಗ್ಗೆ ಮಾತನಾಡಿದ್ದನ್ನು ವಿಡಿಯೋ ಮಾಡಿದ್ದಾನೆ ಎನ್ನಲಾಗಿದೆ. ಅಂದ್ಹಾಗೆ ಈ ಹಿಂದೆ ಯಲಹಂಕ ವಿಧಾನಸಭೆ ಕ್ಷೇತ್ರದಲ್ಲಿ ಗೋಪಾಲಕೃಷ್ಣ, ವಿಶ್ವನಾಥ್ ವಿರುದ್ಧ ಎರಡು ಬಾರಿ ಸ್ಪರ್ಧಿಸಿ ಸೋತಿದ್ದರು.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ