ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ತುಮಕೂರಿನ ತಿಮ್ಮಲಾಪುರದಲ್ಲಿ ನಡೆದಿದೆ.
ಭರತ್ (12), ಆನಂದ್ (10) ಹಾಗೂ ವಿಶ್ವಾಸ್(11) ಮೃತ ದುರ್ದೈವಿಗಳು.
ನಿನ್ನೆ ಮಧ್ಯಾಹ್ನ ತಿಮ್ಲಾಪುರ ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಈಜಲು ಬಾರದೇ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೆರೆಯ ದಡದಲ್ಲಿ ಬಟ್ಟೆ, ಚಪ್ಪಲಿ ನೋಡಿ ಬಾಲಕರು ನೀರಿನಲ್ಲಿ ಮುಳುಗಿರುವುದು ಪತ್ತೆಯಾಗಿದೆ. ಮೃತಪಟ್ಟ ಮೂರು ಬಾಲಕರ ಮೃತದೇಹವನ್ನ ಹೊರ ತೆಗೆದು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಸಿಕೊಳ್ಳಲಾಗಿದೆ.