February 23, 2026

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಸೋಮವಾರದಿಂದ ಮೂರು ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ

Spread the love

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಸೋಮವಾರದಿಂದ ಮೂರು ದಿನಗ ಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದಲ್ಲಿ ಇರುತ್ತಾರೆ.

ಮೂರು ದಿನಗಳ ದೆಹಲಿ ಪ್ರವಾಸಕ್ಕೆ ಸಿದ್ದತೆ ಮಾಡಿಕೊಂಡಿರುವ ಸಿಎಂ, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.

ಸಂಸದರ ಸಭೆ ಬಳಿಕ ವರಿಷ್ಠರನ್ನು ಸಿಎಂ ಭೇಟಿಯಾಗಬಹುದು ಎನ್ನಲಾಗಿದೆ.
ದೆಹಲಿಗೆ ತೆರಳಲು ಸಿಎಂ ಬೊಮ್ಮಾಯಿ ಸಜ್ಜಾಗಿದ್ದಾರೆ. ಆದರೆ ಈವರೆಗೂ ಭೇಟಿಗೆ ಹೈಕಮಾಂಡ್‌ ಸಮಯ ನೀಡಿಲ್ಲ. ಹಲವು ಬಾರಿ ಪ್ರಯತ್ನಿಸಿದರೂ ಈವರೆಗೂ ವರಿಷ್ಠರು ಸಮಯ ನಿಗದಿ ಮಾಡಿಲ್ಲ. ಗೊಂದಲದ ನಡುವೆಯೂ ಸಿಎಂ ದೆಹಲಿಗೆ ತೆರಳುತ್ತಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಸಮೀಪವಿದೆ , ಮೊದಲೆರಡು ಹಂತಗಳ ಚುನಾವಣೆಯಲ್ಲಿ ವರಿಷ್ಠರು ಬ್ಯುಸಿಯಾಗಿದ್ದಾರೆ. ವರಿಷ್ಠರು ಉತ್ತರ ಪ್ರದೇಶ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಭೇಟಿಗೆ ಇನ್ನೂ ಸಮಯ ನಿಗದಿ ಮಾಡಿಲ್ಲ. ಒಂದು ವೇಳೆ ಸಮಯ ಸಿಕ್ಕರೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುವುದು ಅನುಮಾನ. ಚುನಾವಣೆ ಫಲಿತಾಂಶದ ಬಳಿಕ ಈ ಬಗ್ಗೆ ವಿಸ್ತೃತ ಚರ್ಚೆಯಾಗುವ ಸಾಧ್ಯತೆ ಇದೆ.

error: Content is protected !!