ಗುತ್ತಿಗೆದಾರರೊಬ್ಬರಿಂದ 8 ಸಾವಿರ ಲಂಚ ಸ್ವೀಕರಿಸುವ ಮುನ್ನ ಕೆ ಆರ್ ಎಸ್ ನ ಕಾವೇರಿ ನೀರಾವರಿ ನಿಗಮದ ಮೂವರು ನೌಕರರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಾವೇರಿ ನೀರಾವರಿ ನಿಗಮದ ಹಣಕಾಸು ವಿಭಾಗದ ಅಧೀಕ್ಷಕ ಕರೀಗೌಡ, ಲೆಕ್ಕಾಧಿಕಾರಿ ರಾಮಚಂದ್ರ ಹಾಗೂ ಪ್ರಥಮ ದರ್ಜೆ ಗುಮಾಸ್ತ ಸುರೇಶ್ ಅವರುಗಳೇ ಲಂಚ ಸ್ವೀಕರಿಸುವ ಮುನ್ನ ಬಲೆಗೆ ಬಿದ್ದಿದ್ದಾರೆ.
ಗುತ್ತಿಗೆದಾರ ಸಚಿನ್ ಕೃಷ್ಣಮೂರ್ತಿ ಎಂಬುವವರು ಅಂದಾಜು ಒಂದೂವರೆ ಲಕ್ಷದ ಕಾಮಗಾರಿ ಮಾಡಿದ್ದರು. ಈ ಕಾಮಗಾರಿಯ ಬಿಲ್ ಪಾವತಿಗಾಗಿ ಈ ಮೂವರು 8 ಸಾವಿರ ಬೇಡಿಕೆ ಇಟ್ಟಿದ್ದರು.
ಈ ಲಂಚದ ಹಣ ಸ್ವೀಕಾರ ಮಾಡುವ ಮುನ್ನ ಎಸಿಬಿ ಡಿವೈಎಸ್ಪಿ ಧರ್ಮೇಂದ್ರ ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ