ಮಂಗಳೂರಿನಲ್ಲಿ ಹಾಸ್ಟೆಲ್‍ನ ಕಿಟಕಿ ರಾಡ್ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ!

Team Newsnap
1 Min Read

ಮಂಗಳೂರಿನ ಖಾಸಗಿ ಕಾಲೇಜೊಂದರ ಹಾಸ್ಟೆಲ್‍ನಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದಾರೆ. ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳೇ ಪರಾರಿಯಾದವರು.

ಹಾಸ್ಟೆಲ್‍ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದಾರೆ. ಸಚಿವರೊಬ್ಬರ ಅಕ್ರಮ ಬಯಲು: ನಾಳೆ ಸದನದಲ್ಲೇ ಸ್ಪೋಟಕ ಬಾಂಬ್ ಸಿಡಿಸುವೆ – HDK

ಪರಾರಿಯಾದ ವಿದ್ಯಾರ್ಥಿನಿಯರಲ್ಲಿ ಯಶಸ್ವಿನಿ ಮತ್ತು ದಕ್ಷತಾ ಬೆಂಗಳೂರು ನಿವಾಸಿಗಳು ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ. ಕಿಟಕಿ ರಾಡ್ ಮುರಿದು ಹೊರಬಂದು ದಾರಿಯಲ್ಲಿ ಬ್ಯಾಗ್‍ನೊಂದಿಗೆ ಹೋಗುತ್ತಿರುವ ಸಿಸಿಟಿವಿ ವೀಡಿಯೋ ವೈರಲ್ ಆಗಿದೆ.

Share This Article
Leave a comment