crime

ಮೂರು ಮದುವೆಯಾಗಿದ್ದಾನೆ – ಮತ್ತೊಂದು ವಧು ಹುಡುಕಾಟ : ಇದು ಈತನ ಖಯಾಲಿ !

ಇವನಿಗೆ ಮದುವೆ ಆಗೋದೆ ಒಂದು ಖಯಾಲಿ. ಮದುವೆ ಆಗೋದು, ಒಂದೆರಡು ವರ್ಷ ಅವರೊಂದಿಗೆ ಸಂಸಾರ ಮಾಡುವುವುದು. ಬಳಿಕ ಅವರನ್ನು ಬಿಟ್ಟು ಬೇರೆ ಮದುವೆ ಆಗೋದು. ಮುಂದೆ ಈತನ ಕಥೆಯೇ ರೋಚಕ.‌

ಸಂಸಾರದ ಕನಸುಗಳನ್ನು ಕಂಡು ಜೀವನ ಕಳೆಯಲು ಬಯಸುವ ಯುವತಿಯರು ಇವನಿಂದ ಮೋಸ ಹೋಗತ್ತಲೇ ಇದ್ದಾರೆ. ಈತ ಮದುವೆಯನ್ನೇ ವೃತ್ತಿ ಮಾಡಿಕೊಂಡಿರುವ ಭೂಪ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಪಂಚಾಯತಿಯ ದಬ್ಬಡ್ಕದಲ್ಲಿ. ಪ್ರದೀಪ್ ಎಂಬಾತನೇ ಯುವತಿಯರಿಗೆ ಮೋಸ ಮಾಡುತ್ತಿರುವ ಭೂಪ.

ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಚಂದ್ರಶೇಖರ್ ಅವರ ಮಗಳು ಪವಿತ್ರ ಅವರನ್ನು 2017ರ ಆಗಸ್ಟ್ ನಲ್ಲಿ ಮದುವೆ ಆಗಿದ್ದಾನೆ. ಒಂದು ಮಗುವಾಗುತ್ತಲೇ ಇನ್ನಿಲ್ಲದ ಚಿತ್ರಹಿಂಸೆ ಕೊಡಲು ಆರಂಭಿಸಿದ್ದ ಪ್ರದೀಪ್, ನೀನು ತೋಟದಲ್ಲಿ ಕೂಲಿ ಕೆಲಸ ಮಾಡು ಇಲ್ಲವೇ ನಿನ್ನನ್ನು ಸಾಕೋದಕ್ಕೆ ನನ್ನಿಂದ ಆಗಲ್ಲ. ಮನೆ ಖಾಲಿ ಮಾಡು, ಇಲ್ಲವೇ ನಾನೇ ನಿನ್ನನ್ನು ಮತ್ತು ಮಗುವನ್ನು ಕತ್ತರಿಸಿ ಹೊಳೆಗೆ ಹಾಕಿಬಿಡುತ್ತೇನೆ ಎಂದು ಕೊಲೆ ಬೆದರಿಕೆ ಹಾಕುತ್ತಿದ್ದನಂತೆ. ಇಂತಹದ್ದೇ ಚಿತ್ರಹಿಂಸೆಯಿಂದ ರೋಸಿಹೋಗಿದ್ದ ಪವಿತ್ರಳನ್ನು ಅವರ ತಂದೆ ತಾಯಿ ತಮ್ಮ ಮನೆಗೆ ಕರೆದು ತಂದಿದ್ದಾರೆ.

ಪವಿತ್ರನನ್ನು ಮದುವೆಯಾಗುವುದಕ್ಕೂ ಮೊದಲೇ ಒಂದು ಮದುವೆಯಾಗಿ, ಆಕೆಗೂ ಡೈವೋರ್ಸ್ ಕೊಟ್ಟಿದ್ದನಂತೆ.

ಅಲ್ಲದೆ ನನ್ನನ್ನು ಮದುವೆಯಾದ ಬಳಿಕ ಬೆಂಗಳೂರಿನಲ್ಲಿ ಇರುವಾಗ ಕೋಲಾರದ ಹುಡುಗಿಯನ್ನು ಮದುವೆಯಾಗಿದ್ದಾನೆ ಅನ್ನೋದು ಪವಿತ್ರ ಅವರ ಆರೋಪ. ಪ್ರದೀಪನಿಂದ ನೊಂದಿರುವ ಪವಿತ್ರ ನನಗೆ ಆತನಿಂದ ಮುಕ್ತಿ ಬೇಕು, ಡಿವೋರ್ಸ್ ಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಡೈವೋರ್ಸ್ ಆಗುವ ಮುನ್ನವೇ ಇದೀಗ ಕಡಬದಲ್ಲಿ ಮತ್ತೊಂದು ಮದುವೆ ಆಗುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾನಂತೆ.

ಅಂಗನವಾಡಿ ಶಿಕ್ಷಕಿಯೊಬ್ಬರೊಂದಿಗೂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ. ಅದಕ್ಕೆ ಪೂರಕವಾಗಿ ಪ್ರದೀಪ್ ಅಂಗನವಾಡಿ ಶಿಕ್ಷಕಿಯೊಂದಿಗೆ ಸೆಲ್ಫಿ ತೆಗೆದುಕೊಂಡಿರುವ ಫೋಟೋಗಳನ್ನು ಪವಿತ್ರ ಮಾಧ್ಯಮಗಳಿಗೆ ನೀಡಿದ್ದಾರೆ.

ಮೊದಲ ಹೆಂಡತಿ ಡೈವೋರ್ಸ್ ಆಗಿದೆ. ನನಗೆ ಅಪ್ಪ, ಅಮ್ಮ ಇಲ್ಲ ಅಂತ ನಾಟಕವಾಡಿ ಏನೂ ಅರಿಯದ ನನ್ನ ಮಗಳನ್ನು ಒತ್ತಾಯ ಪೂರ್ವಕವಾಗಿ ಮದುವೆಯಾದ. ಅವಳ ಬಾಳನ್ನು ಹಾಳು ಮಾಡಿದ. ಕೇಳಿದರೆ ಪವಿತ್ರಗೆ ಇರುವ ಮಗುವಿನ ಡಿಎನ್‍ಎ ಟೆಸ್ಟ್ ಮಾಡಬೇಕು. ನಿನ್ನ ಮತ್ತು ಮಗುವಿನ ಮೇಲೆ ನಂಬಿಕೆ ಇಲ್ಲ ಎನ್ನುತ್ತಿದ್ದಾನಂತೆ. ಇದೀಗ ಕಡಬದಲ್ಲಿ ಮತ್ತೊಂದು ಹುಡುಗಿಯನ್ನು ಮದುವೆ ಆಗುವುದಕ್ಕೆ ಪ್ರಯತ್ನಿಸುತ್ತಿದ್ದಾನೆ. ದಯವಿಟ್ಟು ಯಾರೂ ಮೋಸ ಹೋಗಬೇಡಿ ಎಂದು ಪ್ರದೀಪನಿಂದ ನೊಂದಿರುವ ಪವಿತ್ರ ಮತ್ತು ಆಕೆ ತಾಯಿ ವಾರಿಜಾ ಕೋರಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024