ಹೊಸ ವರ್ಷದ ಪಾರ್ಟಿಗೆ ಹೋದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವು

Team Newsnap
1 Min Read
Three youths who went to a New Year party drowned in the river ಹೊಸ ವರ್ಷದ ಪಾರ್ಟಿಗೆ ಹೋದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವು

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದ ಬಳಿ ಜರುಗಿದೆ.

ಮೃತ ಯುವಕರನ್ನು ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20) ಹಾಗೂ ನೇಪಾಳ ಮೂಲದ ಪ್ರೇಮ್ ಬೋರಾ(25) ಎಂದು ಗುರುತಿಸಲಾಗಿದೆ.ವಿದೇಶಿಯರಿಗೆ ಮನೆ ಖರೀದಿಗೆ ನಿಷೇಧ ಹೇರಿದ ಕೆನಡಾ

ಹೊಸ ವರ್ಷದ ಹಿನ್ನೆಲೆ ಪಾರ್ಟಿ ಮುಗಿಸಿ ಈಜಲು ತೆರಳಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಬೆಳಗ್ಗಿನಿಂದಲೇ ಅಗ್ನಿಶಾಮಕ ದಳ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a comment