ಸಮಿತಿಯ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಾಶಯಗಳ ನೀರಿನ ಮಟ್ಟ, ಮಳೆ ಪ್ರಮಾಣ ಮತ್ತಿತರ ಅಂಶಗಳ ಕುರಿತು ಪರಾಮರ್ಶೆ ನಡೆಸಿದ ಬಳಿಕ ಸಮಿತಿಯು ರಾಜ್ಯಕ್ಕೆ ಈ ಸಲಹೆ ನೀಡಿತು.
ಜಲ-ಹವಾಮಾನ ಸ್ಥಿತಿ ಸುಧಾರಿಸಿದಾಗ, ನಂತರದ ಅವಧಿಯಲ್ಲಿ ಕರ್ನಾಟಕ ರಾಜ್ಯವು ಈ ಕೊರತೆಯನ್ನು ಉತ್ತಮಗೊಳಿಸಬಹುದು ಎಂದು ಸಮಿತಿ ಹೇಳಿದೆ. ಈ ಸಲಹೆಗೆ ಕರ್ನಾಟಕದ ತಂಡ ಆಕ್ಷೇಪ ವ್ಯಕ್ತಪಡಿಸಿದೆ.
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಸಾಮಾನ್ಯ ವರ್ಷಗಳಲ್ಲಿ ಕರ್ನಾಟಕವು ತಮಿಳುನಾಡಿಗೆ ಪ್ರತಿವರ್ಷ 177 ಟಿಎಂಸಿ ನೀರು ಬಿಡುಗಡೆ ಮಾಡಬೇಕು. ಜೂನ್ನಿಂದ ಸೆಪ್ಟೆಂಬರ್ 25ರ ವರೆಗೆ 117 ಟಿಎಂಸಿ ಬಿಡುಗಡೆ ಮಾಡಬೇಕಿತ್ತು. ಆದರೆ, 43 ಟಿಎಂಸಿ ಅಡಿಯಷ್ಟು ನೀರು ಬಿಟ್ಟಿದೆ. ಅಂದರೆ ನಿಗದಿಪಡಿಸಿದ್ದಕ್ಕಿಂತ 74 ಟಿಎಂಸಿ ಅಡಿಗಳಷ್ಟು ಕಡಿಮೆ ನೀರನ್ನು ಹರಿಸಿದೆ ಎಂಬುದನ್ನು ಸಮಿತಿಯು ಗಮನಿಸಿತು.
ಕರ್ನಾಟಕವು ಪ್ರತಿದಿನ 5 ಸಾವಿರ ಕ್ಯೂಸೆಕ್ನಷ್ಟು ನೀರನ್ನು ತಮಿಳುನಾಡಿಗೆ ಬಿಡಬೇಕು ಎಂದು ಸಮಿತಿಯು ಸೆ. 13ರಂದು ಶಿಫಾರಸು ಮಾಡಿತ್ತು. 13ರಿಂದ 25ರ ವರೆಗೆ 56,700 ಕ್ಯೂಸೆಕ್ (4.91 ಟಿಎಂಸಿ ಅಡಿ) ನೀರನ್ನು ಕರ್ನಾಟಕವು ಬಿಟ್ಟಿದೆ. ಈ ಅವಧಿಯಲ್ಲಿ 0.71 ಟಿಎಂಸಿ ಅಡಿಯಷ್ಟು ಕಡಿಮೆ ನೀರನ್ನು ಬಿಟ್ಟಿದೆ. ಮುಂದಿನ ದಿನಗಳಲ್ಲಿ ಈ ನೀರನ್ನು ಬಿಡುಗಡೆ ಮಾಡಬೇಕು ಎಂದು ಸಮಿತಿ ಹೇಳಿತು.ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಈಗ 49.65 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಈ ವರ್ಷದ ಮುಂಗಾರಿನಲ್ಲಿ ಹಾರಂಗಿಗೆ 21.91 ಟಿಎಂಸಿ ಅಡಿ, ಹೇಮಾವತಿಗೆ 26 ಟಿಎಂಸಿ ಅಡಿ, ಕೆಆರ್ಎಸ್ಗೆ 51.34 ಟಿಎಂಸಿ ಅಡಿ ಹಾಗೂ ಕಬಿನಿಗೆ 40 ಟಿಎಂಸಿ ಅಡಿ ನೀರು ಬಂದಿದೆ. ಈ ಅವಧಿಯಲ್ಲಿ ಕೆಆರ್ಎಸ್ ಜಲಾಶಯದಿಂದ 28.38 ಟಿಎಂಸಿ ಅಡಿ ಹಾಗೂ ಕಬಿನಿಯಿಂದ 22.70 ಟಿಎಂಸಿ ಅಡಿ ನೀರನ್ನು ನದಿಗೆ ಬಿಡಲಾಗಿದೆ. ಇನ್ನೊಂದೆಡೆ, ಮುಂಗಾರಿನಲ್ಲಿ ಕಳೆದ ಮೂವತ್ತು ವರ್ಷಗಳಲ್ಲಿ ಈ ನಾಲ್ಕು ಜಲಾಶಯಗಳ ಸರಾಸರಿ ಒಳಹರಿವಿನ ಪ್ರಮಾಣ 247 ಟಿಎಂಸಿ ಅಡಿಯಷ್ಟು ಇದೆ. ಈ ವರ್ಷ ಒಳಹರಿವಿನ ಪ್ರಮಾಣ ಶೇ 53ರಷ್ಟು ಕಡಿಮೆ ಆಗಿದೆ ಎಂಬುದನ್ನು ಸಮಿತಿ ಗಮನಿಸಿತು.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment