Mysuru

ಪಠ್ಯದಿಂದ ಟಿಪ್ಪು ಕಿತ್ತು ಹಾಕಿದರೂ ಭಾರತೀಯರ ಹೃದಯದಿಂದ ಕಿತ್ತು ಹಾಕಲು ಸಾಧ್ಯವೆ ? ವಿಶ್ವನಾಥ್

ಪುಸ್ತಕದಿಂದ ತೆಗೆದರೂ ಟಿಪ್ಪು ಸುಲ್ತಾನ್ ಭಾರತೀಯರ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್ ವಿಶ್ವನಾಥ್ ಹೇಳಿದರು.

ಮೈಸೂರಿನಲ್ಲಿ ವಿಶ್ವನಾಥ್ ‘ ಟಿಪ್ಪೂ ಮಾನ್ಯತೆ ಸಿಗದ ಸುಲ್ತಾನ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಟಿಪ್ಪು ಜಗತ್ತಿನ ಮಾನ್ಯತೆಗೆ ಒಳಗಾದ ಚಕ್ರವರ್ತಿ. ಕೇಸರಿಯನ್ನು ಒಂದು ಧರ್ಮದವರು, ಹಸಿರನ್ನು ಮತ್ತೊಂದು ಧರ್ಮದವರು ಕಿತ್ತುಕೊಂಡಿದ್ದಾರೆ. ಕಾಮಾಲೆ ಕಣ್ಣಿಂದ, ಮತಾಂಧತೆ ಕಣ್ಣಿನಿಂದ ಟಿಪ್ಪುವನ್ನು ನೋಡಬೇಡಿ ಟಿಪ್ಪು ಈ ನಾಡಿನ ಮಣ್ಣಿನ ಮಗ, ಮೈಸೂರು ಹುಲಿ ಟಿಪ್ಪು ಎಂದು ಹಾಡಿ ಹೊಗಳಿದ್ದಾರೆ.

ಟಿಪ್ಪು 80 ಸಾವಿರ ಕೊಡವರನ್ನು ಕೊಂದ ಎಂದು ಹೇಳುತ್ತಾರೆ. 250 ವರ್ಷದ ಹಿಂದೆ ಅಲ್ಲಿ ಅಷ್ಟು ಜನಸಂಖ್ಯೆ ಇತ್ತಾ? ಟಿಪ್ಪು ಕುರಿತ ಸತ್ಯವನ್ನು ಸುಳ್ಳಾಗಿಸಲು ಯಾರಿಂದಲೂ ಸಾಧ್ಯವಿಲ್ಲ. ಟಿಪ್ಪು ಯಾರಿಗೂ ತಲೆ ಬಾಗಿಲ್ಲ. ಯಾರ ಮುಂದೆಯೂ ಮಂಡಿಯೂರದ ಧೀರ. ಶತ್ರುವಿನ ಮುಂದೆ ಶರಣಾಗದ ಟಿಪ್ಪು ಜಗತ್ತಿನ ಏಕೈಕ ವೀರ ಬಣ್ಣಿಸಿದರು.

ನನ್ನ ಅಜೆಂಡಾ ಬದಲಾಗಿದೆ ಅಂತಾರೆ, ಆದರೆ ನನ್ನ ಅಜೆಂಡಾ ಮಾತ್ರ ಒಂದೇ. ಕಾಂಗ್ರೆಸ್ ಬಿಟ್ಟು ಜೆಡಿಎಸ್‌ಗೆ ಬಂದಾಗಲೂ ಇದನ್ನೇ ಹೇಳಿದ್ದೆ. ಈ ದೇಶದ ಎಲ್ಲಾ ಧರ್ಮ ಗುರುಗಳು ಯಾಕೆ ಮೌನವಾಗಿದ್ದಾರೆ? ಇವತ್ತಿನ ಸ್ಥಿತಿಯನ್ನು ಯಾಕೆ ಖಂಡಿಸುತ್ತಿಲ್ಲ. ಮಠಕ್ಕೆ ಅನುದಾನದ ಕೊಡುತ್ತಾರೆ ಎಂಬ ಕಾರಣಕ್ಕೆ ಸರ್ಕಾರದ ವಿರುದ್ಧ ಮಾತಾಡ್ತಿಲ್ವಾ? ಅನ್ನ ಕಿತ್ತುಕೊಳ್ಳುವ ಕೆಲಸ ರಾಜ್ಯದಲ್ಲಿ ನಡೆಯತ್ತಿದೆ. ಇದರ ವಿರುದ್ಧ ಯಾಕೆ ಧರ್ಮ ಗುರು ಮಾತಾಡ್ತಿಲ್ಲ ಎಂದು ಪ್ರಶ್ನಿಸಿದರು.

Team Newsnap
Leave a Comment
Share
Published by
Team Newsnap

Recent Posts

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024

ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ

ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More

April 25, 2024

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More

April 25, 2024