Hassan

ಟಿಪ್ಪು ಸುಲ್ತಾನ್ ಒಬ್ಬ ಕ್ರೂರಿ ಆತ ಹುಲಿಯೂ ಅಲ್ಲ ಕರಡಿಯೂ ಅಲ್ಲ. ಸಿಂಹವೂ ಅಲ್ಲ : ಸಂಸದ ಪ್ರತಾಪ್‌ ಸಿಂಹ

ಹಾಸನದ ಖಾಸಗಿ ಹೋಟೆಲ್ ಒಂದರಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್‌ ಮಕ್ಕಳನ್ನು ಒತ್ತೆಯಾಗಿಟ್ಟು ತನ್ನ ಜೀವವನ್ನು ಉಳಿಸಿಕೊಂಡ ವ್ಯಕ್ತಿ. ಇನ್ನು ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದಲ್ಲಿ ಟಿಪ್ಪು ಸುಲ್ತಾನ್ ಎಲ್ಲಿ ಸಾವನ್ನಪ್ಪಿದ ? ಟಿಪ್ಪು ಸುಲ್ತಾನ್ ಯಾವ ರಣರಂಗದಲ್ಲಿ ಖಡ್ಗ ಹಿಡಿದು ಹೋರಾಟ ಮಾಡಿದ ? ಯಾವ ಕಾರಣಕ್ಕೆ ಆತನನ್ನು ಹುಲಿ ಎಂದು ಸಂಬೋಧಿಸುತ್ತೀರಾ? ಹುಲಿ ಕೋಟೆಯೊಳಗೆ ಸಾಯಲು ಸಾಧ್ಯವೇ? ಹಾಗಾಗಿ ಟಿಪ್ಪು ಸುಲ್ತಾನ್ ಒಬ್ಬ ಹುಲಿಯು ಅಲ್ಲ ಕರಡಿಯೂ ಅಲ್ಲ. ಸಿಂಹವೂ ಅಲ್ಲ. ಆತ ಒಬ್ಬ ಕ್ರೂರಿ ಮಾತ್ರ ಎಂದರು.

ಟಿಪ್ಪು ಸುಲ್ತಾನ್ ಒಬ್ಬ ಹುಲಿಯು ಅಲ್ಲ ಕರಡಿಯೂ ಅಲ್ಲ. ಸಿಂಹವೂ ಅಲ್ಲ. ಆತ ಒಬ್ಬ ಕ್ರೂರಿ ಮಾತ್ರ ಟಿಪ್ಪುವನ್ನು ಹುಲಿ ಅನ್ನೋದಕ್ಕೆ ಒಂದೇ ಒಂದು ಕಾರಣ ಕೊಡಿ. ಎಂದು ಕೊಡಗು – ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಯಾವುದೇ ವ್ಯಕ್ತಿಯನ್ನು ಬಂಧಿಸಿ ನಂತರ ಆತನಿಗೆ ಚೂರಿ ಹಾಕುವುದು ಚರ್ಮ ಸುಲಿಯುವುದು ಶೌರ್ಯ ಎನಿಸಿಕೊಳ್ಳುವುದಿಲ್ಲ. ಕ್ರೌರ್ಯ ಎನ್ನುತ್ತೇವೆ. ಮೈಸೂರಿನ ಮಹಾರಾಜರು ದೇಶಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಅಂತಹ ವ್ಯಕ್ತಿಗಳನ್ನು ಹುಲಿಯನ್ನಬೇಕೆ ಹೊರತು ಭಾಗಮಂಡಲ ದೇವಸ್ಥಾನದ ಮೇಲೆ ಕತ್ತಿ ಬೀಸಿದ ವ್ಯಕ್ತಿಯನ್ನು ಹುಲಿ ಎನ್ನಲು ಸಾಧ್ಯವಿಲ್ಲ ಎಂದರು .

ಮೈಸೂರಿನ ವಿಶ್ವವಿದ್ಯಾಲಯ ತಂದಿರುವ ಇಂಡಿಯಾ ಎಂಬ ಪುಸ್ತಕದಲ್ಲಿ ಎಲ್ಲಿಯೂ ಕೂಡ ಟಿಪ್ಪು ಒಬ್ಬ ಹುಲಿ ಎಂದು ಪ್ರಸ್ತಾಪಿಸಿಲ್ಲ. ಹಾಗಾಗಿ ಟಿಪ್ಪು ಸುಲ್ತಾನ್ ಒಬ್ಬ ಹುಲಿ ಎನ್ನುವವರು ದಾಖಲೆಗಳಿದ್ದರೆ ನನಗೆ ತೋರಿಸಿ. ಎಂದು ಹೇಳಿದರು.

ಎಂಟನೇ ವಿಶ್ವ ಯೋಗ ದಿನದ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಸುಮಾರು ಒಂದುವರೆ ಲಕ್ಷ ಜನರಿಂದ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಆದರೆ ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜನೆ ಮಾಡುವುದು ಅಥವಾ ರೇಸ್ ಕೋರ್ಸ್ ಆವರಣದಲ್ಲಿ ಆಯೋಜನೆ ಮಾಡುವುದು ಎಂಬ ಗೊಂದಲವಿತ್ತು ಅದನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಅಂತಿಮವಾಗಿ ನಿರ್ಧಾರಮಾಡಲಿದ್ದು ಇದೊಂದು ಐತಿಹಾಸಿಕ ದಿನವಾಗಿ ಆಗಲಿದೆ ಎಂದರು.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024