ಅರೇಮಲ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಿಂದ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಅರೇಮಲ್ಲಾಪುರದ ಗ್ರಾಮ ಪಂಚಾಯಿತಿ ಸದಸ್ಯ ಪ್ರಣವಾನಂದ ಸ್ವಾಮೀಜಿ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ಗ್ರಾಮ ಪಂಚಾಯಿತಿಯಲ್ಲಿ ಜನರ ಸಮಸ್ಯೆಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ.ಇದನ್ನು ಓದಿ –ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿ: ಎಡಿಸಿ ನಾಗರಾಜು
ವಿದ್ಯುತ್ ಅನುಮತಿ, ನೀರಿನ ಅನುಮತಿ, ಖಾತೆಯ ಬದಲಾವಣೆ ಸೇರಿದಂತೆ ಎಲ್ಲ ಸರ್ಕಾರಿ ಸೇವೆಗಳಿಗೆ ಬಡ ಜನರಿಂದ ಲಂಚ ಪಡೆಯುತ್ತಿದ್ದಾರೆ.
ಅಂಗವಿಕಲರಿಗೆ, ನಿರ್ಗತಿಕರಿಗೆ, ವಿಧವೆಯರಿಗೆ ಹಾಗೂ ಕುಷ್ಟರೋಗಿಗಳಿಗೆ ಮಾನವೀಯ ದೃಷ್ಟಿಯಿಂದ ಸೇವೆ ನೀಡುತ್ತಿಲ್ಲ’ ಎಂದು ಆರೋಪಿಸಿದರು.
‘ಉದ್ಯೋಗ ಖಾತ್ರಿ ಸೇರಿದಂತೆ ಹಲವು ಯೋಜನೆಗಳಲ್ಲಿ ಹಣ ದುರುಪಯೋಗವಾಗುತ್ತಿದೆ. ಸರ್ಕಾರದ ಹಣವನ್ನು ಲೂಟಿ ಮಾಡಲಿಕ್ಕಾಗಿಯೇ ಪಿಡಿಒ ಹುದ್ದೆ ಸೃಷ್ಟಿಯಾಗಿದೆ ಎನಿಸುತ್ತಿದೆ.
ಪಂಚಾಯಿತಿಯಲ್ಲಿ ನಡೆಯುವ ಅವ್ಯವಹಾರದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ವ್ಯವಸ್ಥೆಯಲ್ಲಿ ಸುಧಾರಣೆ ತರಲು ಪ್ರಯತ್ನಿಸಿದ ನನಗೆ ಅಪಮಾನ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಕೊಲೆ ಬೆದರಿಕೆ ಹಾಕಲಾಗಿದೆ’ ಎಂದು ದೂರಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು