Karnataka

ಭ್ರಷ್ಟಾಚಾರಕ್ಕೆ ಬೇಸತ್ತು ಗ್ರಾಪಂ ಸದಸ್ಯತ್ವಕ್ಕೆ ರಾಜೀನಾಮೆ-ಪ್ರಣವಾನಂದ ಸ್ವಾಮೀಜಿ

ಅರೇಮಲ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಿಂದ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಅರೇಮಲ್ಲಾಪುರದ ಗ್ರಾಮ ಪಂಚಾಯಿತಿ ಸದಸ್ಯ ಪ್ರಣವಾನಂದ ಸ್ವಾಮೀಜಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ಗ್ರಾಮ ಪಂಚಾಯಿತಿಯಲ್ಲಿ ಜನರ ಸಮಸ್ಯೆಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ.ಇದನ್ನು ಓದಿ –ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿ: ಎಡಿಸಿ ನಾಗರಾಜು

ವಿದ್ಯುತ್‌ ಅನುಮತಿ, ನೀರಿನ ಅನುಮತಿ, ಖಾತೆಯ ಬದಲಾವಣೆ ಸೇರಿದಂತೆ ಎಲ್ಲ ಸರ್ಕಾರಿ ಸೇವೆಗಳಿಗೆ ಬಡ ಜನರಿಂದ ಲಂಚ ಪಡೆಯುತ್ತಿದ್ದಾರೆ.

ಅಂಗವಿಕಲರಿಗೆ, ನಿರ್ಗತಿಕರಿಗೆ, ವಿಧವೆಯರಿಗೆ ಹಾಗೂ ಕುಷ್ಟರೋಗಿಗಳಿಗೆ ಮಾನವೀಯ ದೃಷ್ಟಿಯಿಂದ ಸೇವೆ ನೀಡುತ್ತಿಲ್ಲ’ ಎಂದು ಆರೋಪಿಸಿದರು.

‘ಉದ್ಯೋಗ ಖಾತ್ರಿ ಸೇರಿದಂತೆ ಹಲವು ಯೋಜನೆಗಳಲ್ಲಿ ಹಣ ದುರುಪಯೋಗವಾಗುತ್ತಿದೆ. ಸರ್ಕಾರದ ಹಣವನ್ನು ಲೂಟಿ ಮಾಡಲಿಕ್ಕಾಗಿಯೇ ಪಿಡಿಒ ಹುದ್ದೆ ಸೃಷ್ಟಿಯಾಗಿದೆ ಎನಿಸುತ್ತಿದೆ.

ಪಂಚಾಯಿತಿಯಲ್ಲಿ ನಡೆಯುವ ಅವ್ಯವಹಾರದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ವ್ಯವಸ್ಥೆಯಲ್ಲಿ ಸುಧಾರಣೆ ತರಲು ಪ್ರಯತ್ನಿಸಿದ ನನಗೆ ಅಪಮಾನ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಕೊಲೆ ಬೆದರಿಕೆ ಹಾಕಲಾಗಿದೆ’ ಎಂದು ದೂರಿದರು.

Team Newsnap
Leave a Comment

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024