ಇನ್ನು ಮುಂದೆ ತಿಮ್ಮಪ್ಪನ ಭಕ್ತರು ಹೊಸರೂಪದ ಬ್ಯಾಗ್ನಲ್ಲಿ ಲಡ್ಡುಪ್ರಸಾದ ಪಡೆಯಬಹುದಾಗಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ತಿರುಪತಿ ಲಡ್ಡು ವಿತರಣೆಗೆಂದು ಪರಿಸರ ಸ್ನೇಹಿ ಬ್ಯಾಗ್ ಸಿದ್ಧಪಡಿಸಿದೆ.
ಹೊಸ ಬ್ಯಾಗ್ಗಳಲ್ಲಿ ಲಡ್ಡು ವಿತರಿಸುವ ಕೌಂಟರ್ ಅನ್ನು ಡಿಆರ್ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥ, ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎಸ್. ಜವಾಹರ್ ರೆಡ್ಡಿ ಉದ್ಘಾಟಿಸಿದರು.
ಸಾಂಪ್ರದಾಯಿಕ ಪ್ಲಾಸ್ಟಿಕ್ ಬ್ಯಾಗ್ಗಳು ಆರೋಗ್ಯಕ್ಕೆ ಹಾನಿಕಾರಕವಾಗಿವೆ. ಆದರೆ ಈ ಹೊಸ ಬ್ಯಾಗ್ಗಳು ಆರೋಗ್ಯಕ್ಕೆ ತೊಂದರೆಯಾಗುವುದಿಲ್ಲ. ಮಣ್ಣಿನಲ್ಲಿ ಬೇಗನೆ ಕೊಳೆಯುತ್ತವೆ ಜತೆಗೆ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್ ರೆಡ್ಡಿ ವಿವರಿಸಿದರು.
ಭಕ್ತರ ಪ್ರತಿಕ್ರಿಯೆ ಗಮನಿಸಿ ಪೂರ್ಣಪ್ರಮಾಣದಲ್ಲಿ ಹೊಸಬ್ಯಾಗ್ನಲ್ಲಿ ಲಡ್ಡು ಮಾರಾಟ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ