Main News

SSLC ಪೇಲ್‌ ಕಡಿಮೆ ಮಾಡಲು ಶೇ 10 ರಷ್ಟು ಗ್ರೇಸ್ ಮಾರ್ಕ್ಸ್ : ಸರ್ಕಾರದ ನಿರ್ಧಾರ

SSLC ವಿದ್ಯಾರ್ಥಿಗಳಿಗೆ ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ ಮೂರು ವಿಷಯದಲ್ಲಿ ಶೇ.10ರಷ್ಟು ಗ್ರೇಸ್‌ ಮಾರ್ಕ್ಸ್ ನೀಡಿ ಪಾಸ್‌ ಮಾಡಲು ಸರ್ಕಾರ ತೀರ್ಮಾನಿಸಿದೆ.

ಇದನ್ನು ಓದಿ : ಮೇ 3ನೇ ವಾರ SSLC Result​ :ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಕಠಿಣ rules

ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.

ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾದರೆ, ಇನ್ನುಳಿದ ಮೂರು ವಿಷಯಗಳಲ್ಲಿ ಅನುತ್ತಿರ್ಣವಾಗಿದ್ದರೆ ಆ ಮೂರು ವಿಷಯಗಳಲ್ಲಿ ಥಿಯರಿ ಪರೀಕ್ಷೆಯ ತಲಾ 80 ಅಂಕದ ಶೇ.10ರಷ್ಟು ಅಂದರೆ ಮೂರು ವಿಷಯಗಳಿಂದ 24 ಅಂಕಗಳು ಗ್ರೇಸ್‌ ಅಂಕಗಳಾಗಿ ದೊರೆಯುತ್ತವೆ.

ಕನ್ನಡ ಭಾಷಾ ವಿಷಯಕ್ಕೆ 100 ಅಂಕಗಳಿಗೆ ಥಿಯರಿ ಪರೀಕ್ಷೆ ಇರುವುದರಿಂದ ಶೇ.10 ಅಂದರೆ 10 ಅಂಕಗಳಾಗುತ್ತದೆ.

ಅನುತ್ತೀರ್ಣ ವಿಷಯಗಳಲ್ಲಿ ಪ್ರಥಮ ಭಾಷೆ ಕನ್ನಡ ಇದ್ದಲ್ಲಿ ಮೂರು ವಿಷಯಗಳ ಕೃಪಾಂಕ ಸಂಖ್ಯೆ ಆಗ 26 ಆಗಲಿದೆ. ಈ ಅಂಕಗಳನ್ನು ಅನುತ್ತೀರ್ಣ ವಿಷಯಗಳಿಗೆ ಹಂಚಿಕೆ ಮಾಡಿ ಪಾಸು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಈ ಗ್ರೇಸ್‌ ಅಂಕಗಳನ್ನು ಯಾವ ರೀತಿ ಹಂಚಿಕೆ ಮಾಡಲಾಗುತ್ತದೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.

2021ರ ಪೂರಕ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕದಿಂದಾಗಿ ಶೇ.9ರಷ್ಟು ವಿದ್ಯಾರ್ಥಿಗಳು(Students) ಉತ್ತೀರ್ಣವಾಗಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ಗರಿಷ್ಠ 26 ಅಂಕಗಳನ್ನು ನೀಡಲಾಗಿತ್ತು.

ಇದನ್ನು ಓದಿ : ರಮ್ಯಾ ನೀವು ಎಷ್ಟು ದಿನ ಎಲ್ಲಿದ್ದಿರಿ ? KPCC ಸೋಷಿಯಲ್ ಮೀಡಿಯಾ ಮುಖ್ಯಸ್ಥ ನಾಯ್ಡು ಪ್ರಶ್ನೆ

ಕಳೆದ ಬಾರಿಯಂತೆ ಈ ಬಾರಿಯೂ ಆರಂಭದಲ್ಲಿ ಸರಿಯಾಗಿ ತರಗತಿಗಳು ನಡೆದಿಲ್ಲ. ಹೀಗಾಗಿ ಮಕ್ಕಳಲ್ಲಿ ಕಲಿಕೆಯ ಕೊರತೆ ಸಹಜ ಎಂದು ಗ್ರೇಸ್‌ ಅಂಕ ನೀಡಲಾಗುತ್ತಿದೆ.

ಬಹುಶಃ ಈ ಬಾರಿಯೂ ಗ್ರೇಸ್‌ ಅಂಕ ಪಡೆದು ಪಾಸಾಗುವ ಮಕ್ಕಳ ಸಂಖ್ಯೆ ಹೆಚ್ಚೇ ಇರುತ್ತದೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

SSLC ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ನ್ನುClick ಮಾಡಿ :

http://karresults.nic.in/

Team Newsnap
Leave a Comment
Share
Published by
Team Newsnap

Recent Posts

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024