ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ಹಾಗೂ ಶ್ರೀಮತಿ ಮಾಲಾರವರನ್ನು ಚನ್ನರಾಯಪಟ್ಟಣ ತಾಲೂಕು ಅಭಿಮಾನಿಗಳ ಬಳಗದ ಪರವಾಗಿ ಶಾಸಕರಾದ ಸಿ.ಎನ್.ಬಾಲಕೃಷ್ಣರವರು ಸನ್ಮಾನಿಸಿ ತವರಿಗೆ ಗೌರವ ಸಮರ್ಪಣೆ ಮಾಡಿ ಶುಭ ಹಾರೈಸಿದರು.
ಪತ್ರಕರ್ತರಾಗಿ ಮತ್ತು ಸಂಘಟಕರಾಗಿ ಶಿವಾನಂದ ತಗಡೂರು ಅವರ ವೃತ್ತಿ ನಿಷ್ಠೆ, ವಿಭಿನ್ನ ಕಾರ್ಯ ವೈಖರಿ ಹಾಗೂ ಸಮಾಜಮುಖಿ ಕೆಲಸಗಳಿಂದ ಪತ್ರಕರ್ತರ ಸಮುದಾಯಕ್ಕೆ ಸಲ್ಲಿಸಿರುವ ಸೇವೆ ಅನನ್ಯ ಎಂದು ಸಮಾರಂಭದಲ್ಲಿ ಅಭಿಮಾನದಿಂದ ಸ್ಮರಿಸಲಾಯಿತು.

ಮಾನವೀಯ ತುಡಿತದಿಂದ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗೆ ಸ್ಪಂದಿಸಿದ ಪರಿಯಿಂದಲೇ ಅವರು ಸಮಾಜಕ್ಕೆ ಮಾದರಿಯಾಗಿ ನಡೆದುಕೊಂಡಿರುವುದು ಶ್ಲಾಘನೀಯ ಎಂದು ಅವರ ಸೇವೆ ಸ್ಮರಿಸಲಾಯಿತು.
ಇದೇ ಸಂದರ್ಭದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಪತ್ರಕರ್ತರು, ನವಿಲೆ, ತಗಡೂರು ಸುತ್ತಮುತ್ತಲ ಗ್ರಾಮಸ್ಥರು ಸಹ ಸನ್ಮಾನಿಸಿ ಶುಭ ಹಾರೈಸಿದರು .
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ್ಳು ಗೋಪಾಲ್, ಉಪಾಧ್ಯಕ್ಷರಾದ ವೇಣುಕುಮಾರ್, ಪ್ರದಾನ ಕಾರ್ಯದರ್ಶಿ ಬನವಾಸೆ ಮಂಜು, ರಾಷ್ಟೀಯ ಮಂಡಳಿ ಸದಸ್ಯ ಜಿ.ಪ್ರಕಾಶ್, ತಾಲೂಕು ಅಭಿಮಾನಿಗಳ ಬಳಗದ ಸಂಚಾಲಕ ಎನ್.ಪರಮೇಶ್, ತಗಡೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜು, ಅಣತಿ ಆನಂದ್, ಮಾಜಿ ಪ್ರದಾನರಾದ ವೀರೇಶ್, ಪ್ರಮುಖರಾದ ಗಿರೀಶ್, ವೀರೇಶ್,ಅಶೋಕ್ ಓಬಳಾಪುರ ಬಸವರಾಜ್, ಬಾಗೂರು ಶಿವಣ್ಣ ಮತ್ತಿತರರು ಹಾಜರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್