Hassan

ಶಿವಾನಂದ ತಗಡೂರು ಅವರಿಗೆ ತವರಿನಲ್ಲಿ ಅಭಿಮಾನದ ಸನ್ಮಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ಹಾಗೂ ಶ್ರೀಮತಿ ಮಾಲಾರವರನ್ನು ಚನ್ನರಾಯಪಟ್ಟಣ ತಾಲೂಕು ಅಭಿಮಾನಿಗಳ ಬಳಗದ ಪರವಾಗಿ ಶಾಸಕರಾದ ಸಿ.ಎನ್.ಬಾಲಕೃಷ್ಣರವರು ಸನ್ಮಾನಿಸಿ ತವರಿಗೆ ಗೌರವ ಸಮರ್ಪಣೆ ಮಾಡಿ ಶುಭ ಹಾರೈಸಿದರು.

ಪತ್ರಕರ್ತರಾಗಿ ಮತ್ತು ಸಂಘಟಕರಾಗಿ ಶಿವಾನಂದ ತಗಡೂರು ಅವರ ವೃತ್ತಿ ನಿಷ್ಠೆ, ವಿಭಿನ್ನ ಕಾರ್ಯ ವೈಖರಿ ಹಾಗೂ ಸಮಾಜಮುಖಿ ಕೆಲಸಗಳಿಂದ ಪತ್ರಕರ್ತರ ಸಮುದಾಯಕ್ಕೆ ಸಲ್ಲಿಸಿರುವ ಸೇವೆ ಅನನ್ಯ ಎಂದು ಸಮಾರಂಭದಲ್ಲಿ ಅಭಿಮಾನದಿಂದ ಸ್ಮರಿಸಲಾಯಿತು.

ಮಾನವೀಯ ತುಡಿತದಿಂದ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗೆ ಸ್ಪಂದಿಸಿದ ಪರಿಯಿಂದಲೇ ಅವರು ಸಮಾಜಕ್ಕೆ ಮಾದರಿಯಾಗಿ ನಡೆದುಕೊಂಡಿರುವುದು ಶ್ಲಾಘನೀಯ ಎಂದು ಅವರ ಸೇವೆ ಸ್ಮರಿಸಲಾಯಿತು.

ಇದೇ ಸಂದರ್ಭದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಪತ್ರಕರ್ತರು, ನವಿಲೆ, ತಗಡೂರು ಸುತ್ತಮುತ್ತಲ ಗ್ರಾಮಸ್ಥರು ಸಹ ಸನ್ಮಾನಿಸಿ ಶುಭ ಹಾರೈಸಿದರು .
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ್ಳು ಗೋಪಾಲ್, ಉಪಾಧ್ಯಕ್ಷರಾದ ವೇಣುಕುಮಾರ್, ಪ್ರದಾನ ಕಾರ್ಯದರ್ಶಿ ಬನವಾಸೆ ಮಂಜು, ರಾಷ್ಟೀಯ ಮಂಡಳಿ ಸದಸ್ಯ ಜಿ.ಪ್ರಕಾಶ್, ತಾಲೂಕು ಅಭಿಮಾನಿಗಳ ಬಳಗದ ಸಂಚಾಲಕ ಎನ್.ಪರಮೇಶ್, ತಗಡೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜು, ಅಣತಿ ಆನಂದ್, ಮಾಜಿ ಪ್ರದಾನರಾದ ವೀರೇಶ್, ಪ್ರಮುಖರಾದ ಗಿರೀಶ್, ವೀರೇಶ್,ಅಶೋಕ್ ಓಬಳಾಪುರ ಬಸವರಾಜ್, ಬಾಗೂರು ಶಿವಣ್ಣ ಮತ್ತಿತರರು ಹಾಜರಿದ್ದರು.

Team Newsnap
Leave a Comment
Share
Published by
Team Newsnap

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024