ಮೈಸೂರು ಜಿಲ್ಲಾಧಿbಕಾರಿ ರೋಹಿಣಿ ಸಿಂಧೂರಿ ನೇಮಕ ವಿರೋಧಿಸಿ ಐಎಎಸ್ ಅಧಿಕಾರಿ ಬಿ. ಶರತ್ ಸಿಎಟಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ
ಇತ್ಯರ್ಥ ನಾಳೆಯೇ ಆಗುವ ಸಾಧ್ಯತೆ ಇದೆ.
ಈಗಾಗಲೇ ಅರ್ಜಿ ವಿಚಾರಣೆ
ಮಾಡಿರುವ ನ್ಯಾಯಾಲಯದ ನಾಳೆಯೇ ತೀರ್ಪು ಹೊರಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಿ. ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದ 29 ದಿನಗಳಲ್ಲೇ, ಅವರನ್ನು ವರ್ಗಮಾಡಿ ಆ ಜಾಗಕ್ಕೆ ರೋಹಿಣಿಯವರನ್ನು ಸರ್ಕಾರ ತಂದು ಕೂರಿಸಿತ್ತು. ಸರ್ಕಾರದ ನಡೆಯನ್ನು ವಿರೋಧಿಸಿದ ನಿರ್ಗಮಿತ ಜಿಲ್ಲಾಧಿಕಾರಿ ಶರತ್ ಸಿಎಟಿ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಅರ್ಜಿಯ ವಿಚಾರಣೆ ಪದೇ ಪದೇ ಮುಂದಕ್ಕೆ ಹೋಗುತ್ತಲೇ ಇತ್ತು.
ಹಲವು ದಿನಗಳಿಂದ ವಿಚಾರಣೆ ನಡೆಸಿರುವ ಸಿಎಟಿ ನ್ಯಾಯಾಲಯ ನಾಳೆ ನೀಡಲಿರುವ ತೀರ್ಪು ಶರತ್ ಪರವಾದರೆ, ರೋಹಿಣಿಯವರಿಗೆ ಮಾತ್ರವಲ್ಲದೇ ಸರ್ಕಾರಕ್ಕೂ ಸಹ ತೀವ್ರ ತರಹದ ಸಂಕಷ್ಟವನ್ನು ತಂದೊಡ್ಡಲಿದೆ.
ಕೆಲ ದಿನಗಳ ಹಿಂದೆ ಶರತ್ ತಮಗೆ ನ್ಯಾಯ ಸಿಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಆಸ್ಪತ್ರೆಯನ್ನೂ ಸೇರಿದ್ದರು.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್