ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದಾರೆ. ಸಿಎಂ ಬೊಮ್ಮಾಯಿ ದಿನವಿಡೀ ವಿವಿಧ ಕೇಂದ್ರ ಸಚಿವರು, ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಸಂಪುಟ ಸರ್ಕಸ್ ಕುರಿತು ಚರ್ಚಿಸಲಿದ್ದಾರೆ.
ಸಂಜೆ ಬಂಡವಾಳ ಹೂಡಿಕೆದಾರರ ಸಮ್ಮೇಳನದ ಪೂರ್ವಭಾವಿಯಾಗಿ ವಿದೇಶಿ ಗಣ್ಯರ ಭೇಟಿ ಮಾಡಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ, ರಾತ್ರಿ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ಮಾಡುವ ಸಾಧ್ಯತೆ ಇದೆ.
ಬುಧವಾರ ಮಧ್ಯಾಹ್ನ ಅಥವಾ ಸಂಜೆ ಸಿಎಂ ಬೆಂಗಳೂರಿಗೆ ವಾಪಾಸ್ಸಾಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದರೆ ಗುರುವಾರ ಅಥವಾ ಶುಕ್ರವಾರ ಸಂಪುಟ ಪುನರ್ರಚನೆ ಆಗುವ ಸಾಧ್ಯತೆ ಇದೆ.