ಕೆಆರ್ಎಸ್ ಡ್ಯಾಂನಲ್ಲಿ ಯಾವುದೇ ಬಿರುಕಿಲ್ಲ. ಸೇಫ್ ಆಗಿದೆ ಎಂದು ಅಧಿಕೃತ ಮಾಹಿತಿ ನೀಡಿದೆ.
ಕೆಆರ್ಎಸ್ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನಲಾದ ವದಂತಿಗೆ ಕಾವೇರಿ ನೀರಾವರಿ ನಿಗಮ ನಿಯಮಿತ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳಲ್ಲಿ ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ವರದಿಯಾಗುತ್ತಿದೆ.. ಆದರೆ ಆ ವರದಿ ಸತ್ಯಕ್ಕೆ ದೂರವಾದ ಅಂಶವಾಗಿದೆ ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಎಂಡಿ ಕೆ. ಜೈಪ್ರಕಾಶ್ ಸ್ಪಷ್ಟನೆ ನೀಡಿದ್ದಾರೆ.
ಅಣೆಕಟ್ಟು ಸುರಕ್ಷತಾ ಪರಿಶೀಲನಾ ಸಮಿತಿ ತಂಡ ಕೆಆರ್ಎಸ್ ಡ್ಯಾಂ ಅನ್ನ ಪರಿಶೀಲನೆ ಮಾಡಿತ್ತು. ಈ ವೇಳೆ ಬಾಡಿ ವಾಲ್ನಲ್ಲಿ ಯಾವುದೇ ತರಹದ ಬಿರುಕಿಲ್ಲ ಅಂಶ ಬೆಳಕಿಗೆ ಬಂದಿದೆ. ಮಳೆಗಾಲದ ಮುನ್ನ ಹಾಗೂ ನಂತರ ಯಾವುದೇ ಬಿರುಕು ಕಂಡುಬಂದಿಲ್ಲ ಎಂದು ವರದಿಯಲ್ಲಿ ಅಧಿಕೃತವಾಗಿ ಉಲ್ಲೇಖಿಸಿದೆ.