ಟೂಲ್ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ್ತಿ ಬೆಂಗಳೂರಿನ ದಿಶಾ ರವಿಗೆ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಜಾಮೀನು ನೀಡಿದೆ.
ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯದ ಹೆಚ್ಚುವರಿ ಸೆಷನ್ ಕೋರ್ಟ್ ನ್ಯಾ.
ಧರ್ಮೇಂದ್ರ ರಾಣಾ ಜಾಮೀನು ನೀಡಿ, ಇಬ್ಬರು ಶ್ಯೂರಿಟಿ ನೀಡಬೇಕು ಮತ್ತು 1 ಲಕ್ಷ ರೂ. ಬಾಂಡ್ ಪಾವತಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.
ಸ್ವಿಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಿಶಾ ರವಿಯನ್ನ ದೆಹಲಿ ಪೊಲೀಸರು ಬಂಧಿಸಿದ್ದರು.
ಬಳಿಕ ನ್ಯಾಯಾಲಯ ಬಂಧಿತ ಆರೋಪಿಯನ್ನು ಐದು ದಿನ ಪೊಲೀಸರ ವಶಕ್ಕೆ ನೀಡಿತ್ತು. ಇದೀಗ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಿದೆ.
21 ವರ್ಷದ ದಿಶಾ ರವಿ ಓರ್ವ ಪರಿಸರ ಹೋರಾಟಗಾರ್ತಿಯಾಗಿದ್ದಾರೆ. ಭಾರತದಲ್ಲಿ ಫ್ರೈಡೆ ಫಾರ್ ಫ್ಯೂಚರ್ ಹೆಸರಿನ ಸರ್ಕಾರೇತರ ಸಂಸ್ಥೆಯನ್ನು ಸ್ಥಾಪಿಸಿದ್ದರು.
ದಿಶಾ ರವಿ ತಂದೆ ಮೈಸೂರಿನಲ್ಲಿ ಅಥ್ಲೆಟಿಕ್ಸ್ ಕೋಚ್ ಆಗಿದ್ದು ತಾಯಿ ಗೃಹಿಣಿಯಾಗಿದ್ದಾರೆ. ಈ ಟ್ವೀಟ್ ಮಾಡಿ ಬೆಂಬಲ ನೀಡಲು ಟೂಲ್ ಕಿಟ್ ಮುಖಾಂತರ ಹಣ ಪಡೆದ ಆರೋಪ ದಿಶಾ ರವಿ ಮೇಲಿದೆ.
ದೇಶದಲ್ಲಿ ನಡೆಯುತ್ತಿರುವ ಕೃಷಿ ಆಂದೋಲನವನ್ನು ಬೆಂಬಲಿಸಿ ಗ್ರೇಟಾ ಥನ್ಬರ್ಗ್ ಇತೀಚೆಗೆ ಟ್ವೀಟ್ ಮಾಡಿದ್ದರು. ಇದರ ಜೊತೆ ಇನ್ನೊಂದು ಟ್ವೀಟ್ ಮಾಡಿ ಒಂದು ಡಾಕ್ಯುಮೆಂಟ್ ರಿಲೀಸ್ ಮಾಡಿದ್ದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಹೇಗೆ ಚಳವಳಿ ನಡೆಸಬೇಕು ಎಂಬ ಕಾರ್ಯಯೋಜನೆ ಟೂಲ್ ಕಿಟ್ ನಲ್ಲಿತ್ತು. ಆ ಟ್ವೀಟ್ ಭಾರತದಲ್ಲಿನ ಕೃಷಿ ಚಳವಳಿಯಲ್ಲಿ ವಿದೇಶಿ ಶಕ್ತಿಗಳ ಕೈವಾಡವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಆಪಾದಿಸಿತ್ತು. ಈ ಆರೋಪಗಳ ಬೆನ್ನಲ್ಲೇ ಗ್ರೇಟಾ ಥನ್ಬರ್ಗ್ ಟೂಲ್ ಕಿಟ್ ತನ್ನ ಟ್ವೀಟ್ ಡಿಲೀಟ್ ಮಾಡಿದ್ದರು. ನಂತರ ಹೊಸ ಟ್ವೀಟ್ ಮಾಡಿ ಹೊಸ ಟೂಲ್ ಕಿಟ್ ಬಿಡುಗಡೆ ಮಾಡಿದ್ದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment