ಕೊಲ್ಲಂ ಮೂಲದ 17 ವರ್ಷದ ಈ ವಿದ್ಯಾರ್ಥಿನಿ ಮಾಧ್ಯಮದ ಮುಂದೆ ಧೈರ್ಯವಾಗಿ ಮಾತನಾಡಿ, ಅದೊಂದು ಕೆಟ್ಟ ಅನುಭವ ಎಂದಿದ್ದಾಳೆ. ಇದನ್ನು ಓದಿ –ಶೃಂಗೇರಿಗೆ ಶ್ರೀಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ 3 ವರ್ಷ ಜೈಲು, 10 ಸಾವಿರ ರು ದಂಡ
ಅಂದು ಪರೀಕ್ಷಾ ಕೇಂದ್ರದಲ್ಲಿ ಅವರು ನನ್ನನ್ನು ಕರೆದರು ಸ್ಕ್ಯಾನಿಂಗ್ ಮಾಡಿದರು . ಸ್ಕ್ಯಾನ್ ಆದ ಬಳಿಕ ನಮ್ಮನ್ನು ಒಳಗೆ ಕಳುಹಿಸುತ್ತಾರೆ ಎಂದು ನಾವು ಭಾವಿಸಿದೆವು. ಆದರೆ, ಎರಡು ಕ್ಯೂಗಳಲ್ಲಿ ನಮ್ಮನ್ನು ನಿಲ್ಲಿಸಲಾಯಿತು. ಒಂದು ಕ್ಯೂ ಲೋಹದ ಕೊಕ್ಕೆ (ಮೆಟಲ್ ಹೂಕ್ಸ್) ಇಲ್ಲದ ಬ್ರಾ ಧರಿಸಿದವರಿಗೆ, ಹಾಗೇ ಇನ್ನೊಂದು ಕ್ಯೂ ಇತ್ತು.
ನೀವು ಲೋಹದ ಕೊಕ್ಕೆ ಇರುವ ಒಳ ಉಡುಪುಗಳನ್ನು ಧರಿಸಿದ್ದೀರಾ? ಎಂದು ಅವರು ನನ್ನನ್ನು ಕೇಳಿದರು. ಅದಕ್ಕೆ ನಾನು ಹೌದು ಎಂದೆ. ನಂತರ ಆ ಸಾಲಿನಲ್ಲಿ ನಿಲ್ಲುವಂತೆ ಹೇಳಿದರು. ನನಗೆ ಅಲ್ಲಿ ಏನು ನಡೆಯುತ್ತಿದೆ? ಮತ್ತು ಯಾಕೆ ಹೀಗೆ ನಡೆಯುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಆಗಲಿಲ್ಲ ಎಂದು ಸಂತ್ರಸ್ತ ವಿದ್ಯಾರ್ಥಿನಿ ತಿಳಿಸಿದ್ದಾಳೆ.
ಒಳ ಉಡುಪುಗಳನ್ನು ಕಳೆದು ಟೇಬಲ್ ಮೇಲೆ ಇಡುವಂತೆ ಹೇಳಿದರು. ಎಲ್ಲಾ ಒಳ ಉಡುಪುಗಳನ್ನು ಅಲ್ಲಿಯೇ ನೇತು ಹಾಕಿದ್ದರು. ನಾವು ಪರೀಕ್ಷೆ ಬರೆದು ಹಿಂತಿರುಗಿದಾಗ ನಮ್ಮದು ನಮಗೆ ಹಿಂತಿರುಗುತ್ತದೆ ಎಂಬ ಖಚಿತತೆಯೂ ಇರಲಿಲ್ಲ. ಪರೀಕ್ಷೆ ಬರೆದು ಮರಳಿ ಬಂದಾಗ ಅಲ್ಲಿ ತುಂಬಾ ಮಂದಿ ಇದ್ದರು. ಅದೊಂದು ಹರಸಾಹಸದ ಕ್ಷಣವಾಗಿತ್ತು. ಆದರೂ, ನನ್ನದ್ದನ್ನು ನಾನು ಮರಳಿ ಪಡೆದುಕೊಂಡೆ. ಯಾವುದೇ ವೈದ್ಯಕೀಯ ಆಕಾಂಕ್ಷಿಗಳು ತೆಗೆದುಕೊಳ್ಳಬಹುದಾದ ಪ್ರಮುಖ ಪರೀಕ್ಷೆಗಳಲ್ಲಿ ಎದುರಾದಂತಹ ನೋವಿನ ಕ್ಷಣವಿದು. ಇದನ್ನೆಂದು ಮರೆಯಲಾಗದು ಎಂದು ವಿದ್ಯಾರ್ಥಿನಿ ಹೇಳುವಾಗ ಆಕೆಯ ಕಣ್ಣಲ್ಲಿ ನೀರು ತುಂಬಿತ್ತು
ಬ್ರಾಗಳನ್ನು ಇಲ್ಲಿಯೇ ಧರಿಸಬೇಡಿ, ಕೈಯಲ್ಲಿ ತೆಗೆದುಕೊಂಡು ಹೊರಗೆ ಹೋಗಿ ಎಂದರು. ಅದನ್ನು ಕೇಳಿ ನಾವು ತುಂಬಾ ಮುಜುಗರಕ್ಕೀಡಾದೆವು. ಆದರೆ, ಎಲ್ಲರೂ ಬದಲಾಯಿಸಲು ಕಾಯುತ್ತಿದ್ದರು. ಅಲ್ಲಿ ತುಂಬಾ ಕತ್ತಲಾಗಿತ್ತು ಮತ್ತು ಬದಲಾಯಿಸಲು ಸ್ಥಳವಿರಲಿಲ್ಲ. ನಿಜವಾಗಿಯೂ ಇದೊಂದು ಭಯಾನಕ ಅನುಭವ. ನಾವು ಪರೀಕ್ಷೆಯನ್ನು ಬರೆಯುವಾಗ ನಮ್ಮ ಕೂದಲುಗಳಿಂದ ನಮ್ಮ ಎದೆ ಭಾಗವನ್ನು ಮುಚ್ಚಿಕೊಳ್ಳಬೇಕಾಯಿತು.
ನಮ್ಮ ಬಳಿ ಯಾವುದೇ ಶಾಲೂ ಅಥವಾ ಕವರ್ ಸಹ ಇರಲಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಹುಡುಗರು ಮತ್ತು ಹುಡುಗಿಯರಿದ್ದರು ಮತ್ತು ನಿಜವಾಗಿಯೂ ಇದು ಕಷ್ಟಕರವಾಗಿತ್ತು. ತುಂಬಾ ಅನಾನುಕೂಲ ಪರಿಸ್ಥಿತಿಯನ್ನು ಎದುರಿಸಬೇಕಾಯಿತು ಎಂದು ಹುಡುಗಿ ತಿಳಿಸಿದಳು.
ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ ಬಳಿಕ ಈ ಘಟನೆ ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಚರ್ಚೆಯಾಗಿ ದೇಶಾದ್ಯಂತ ತೀವ್ರ ಆಕ್ರೋಶವು ವ್ಯಕ್ತವಾಯಿತು. ಶೇ. 90ರಷ್ಟು ವಿದ್ಯಾರ್ಥಿನಿಯರ ಒಳಉಡುಪುಗಳನ್ನು ತೆಗೆಸಿದ್ದಾರೆ ಎಂದು ಹೇಳಲಾಗಿದೆ.
ನಿಮ್ಮ ಭವಿಷ್ಯಕ್ಕಿಂತ ಒಳಉಡುಪು ನಿಮಗೆ ದೊಡ್ಡದಾಗಿದೆಯೇ? ಅದನ್ನು ತೆಗೆದುಹಾಕಿ ಮತ್ತು ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಪರೀಕ್ಷಾ ಕೇಂದ್ರದ ಭದ್ರತಾ ಸಿಬ್ಬಂದಿಯೊಬ್ಬರು ನೀಡಿದ ಹೇಳಿಕೆಯನ್ನು ಸಂತ್ರಸ್ತ ವಿದ್ಯಾರ್ಥಿನಿ ತಂದೆಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಂಗಳವಾರ ಇನ್ನು ಎರಡು ದೂರುಗಳು ದಾಖಲಾಗಿದೆ.
ಇದರ ಬೆನ್ನಲ್ಲೇ ಘಟನೆಯ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸತ್ಯಶೋಧನಾ ತಂಡಕ್ಕೆ ಆದೇಶಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಕೂಡ ಈ ಘಟನೆಯನ್ನು ಖಂಡಿಸಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment