Main News

ಟಯೋಟಾ ಸಮಸ್ಯೆ : ಕಾರ್ಮಿಕ ಇಲಾಖೆಯ ನಿಷೇಧದ ನಡುವೆಯೂ ಲಾಕ್ಔಟ್

ಬಿಡದಿಯ ಟಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಲಿಮಿಟೆಡ್‌ ನಲ್ಲಿ ಕಾರ್ಮಿಕ ಮತ್ತು ಆಡಳಿತ ಮಂಡಳಿ ನಡುವೆ ಉದ್ಭವಿಸಿರುವ ಸಮಸ್ಯೆಗಳನ್ನು ಶಾಂತಿಯುತವಾಗಿ ಪರಿಹರಿಸಲು ಸಚಿವ ಶಿವರಾಂ ಹೆಬ್ಬಾರ್ ಆದೇಶದಂತೆ ಕಾರ್ಮಿಕ ಇಲಾಖೆ ಹತ್ತು ಹಲವು ಪ್ರಯತ್ನಗಳು ಮುಂದುವರೆದಿವೆ.

ಕಳೆದ ನವೆಂಬರ್ 9ರಂದು ಕಾರ್ಮಿಕರ ಸಂಘಟನೆ ಪದಾಧಿಕಾರಿಗಳನ್ನು ಆಡಳಿತ ಮಂಡಳಿ ಅಮಾನತುಗೊಳಿಸಿದ ಮೇಲೆ ದಿಢೀರ್ ಮುಷ್ಕರ ಆರಂಭಿಸಿದ್ದರು.

ಆಡಳಿತ ಮಂಡಳಿ ಸಹ ತಕ್ಷಣ ನ. 10ರಂದು ಲಾಕ್ಔಟ್ ಘೋಷಿಸುವ ಮೂಲಕ ಸಂಸ್ಥೆಯ ಕಾರ್ಯಕಲಾಪ ಗಳನ್ನು ಸ್ಥಗಿತಗೊಳಿಸಿತ್ತು. ಈ ಬೆಳವಣಿಗೆಯ ತೀವ್ರತೆಯನ್ನು ಅರಿತಿದ್ದ ಕಾರ್ಮಿಕ ಇಲಾಖೆ ಕೂಡಲೇ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿತು.

ಡಿ. 18ರಂದು ಆಡಳಿತ ಮಂಡಳಿ ಲಾಕ್ಔಟ್ ತೆರವುಗೊಳಿಸಿ 19ರಿಂದ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಪುನಃ ಆಡಳಿತ ಮಂಡಳಿ ಘಟಕದಲ್ಲಿ ಅಶಾಂತಿಯ ವಾತಾವರಣದ ಕಾರಣ ನೀಡಿ ಲಾಕ್ಔಟ್ ಘೋಷಿಸಿತು.

ಆದರೆ ಎರಡನೇ ಬಾರಿಯ ಲಾಕ್ಔಟ್ ನೋಟಿಸ್ ನಲ್ಲಿ ಟಯೋಟಾ ಆಡಳಿತ ಮಂಡಳಿಯು ಷರತ್ತುಬದ್ಧ ಒಪ್ಪಿಗೆ ಪತ್ರ ಸಲ್ಲಿಸುವ ಕಾರ್ಮಿಕರಿಗೆ ಕೆಲಸಕ್ಕೆ ಹಾಜರಾಗಲು ಅವಕಾಶ ಮಾಡಿಕೊಟ್ಟಿದೆ. ಇದರ ಪರಿಣಾಮ ಸುಮಾರು 1000 ಕಾರ್ಮಿಕರು ಕಾರ್ಖಾನೆಯಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದರು.

ಈ ನಡುವೆ, ಕಾರ್ಖಾನೆ ಆಡಳಿತ ಮಂಡಳಿಯು ಕರ್ತವ್ಯಲೋಪ ಮತ್ತು ಅಶಿಸ್ತಿನ ಕಾರಣ ನೀಡಿ 69 ಕಾರ್ಮಿಕರನ್ನು ಅಮಾನತು ಗೊಳಿಸಿದರು.‌ ಇಲಾಖಾ ವಿಚಾರಣೆ ಬಾಕಿ ಇದ್ದು, ಕಾನೂನು ಪ್ರಕಾರ ನಿಷೇಧಿತ ಲಾಕ್ಔಟ್ ಮತ್ತು ಮುಷ್ಕರ ಶಿಕ್ಷಾರ್ಹ ಅಪರಾಧವಾಗಿದೆ, ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯು ಕಾರ್ಮಿಕ ಸಂಘಟನೆಗಳು ಮತ್ತು ಆಡಳಿತ ಮಂಡಳಿ ವಿರುದ್ಧ ಮೊಕದ್ದಮೆ ಹೂಡಲು ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ವಿಚಾರಣೆ ನಿಗಧಿಪಡಿಸಲಾಗಿದೆ.

Team Newsnap
Leave a Comment
Share
Published by
Team Newsnap
Tags: toyoto

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024