February 22, 2026

Newsnap Kannada

The World at your finger tips!

sucide

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ನೌಕರ ನೇಣು ಬಿಗಿದು ಆತ್ಮಹತ್ಯೆ

Spread the love

ಮುಷ್ಕರ ದಲ್ಲಿ ಪಾಲ್ಗೊಂಡಿದ್ದ ವಾಯುವ್ಯ ಸಾರಿಗೆ ನೌಕರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸವದತ್ತಿಯಲ್ಲಿ ಜರುಗಿದೆ.

ಶಿವಕುಮಾರ್ ನೀಲಾಗಾರ್ (40) ಎಂಬಾತನೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಈ ಆತ್ಮಹತ್ಯೆಗೆ ಸಾರಿಗೆ ಅಧಿಕಾರಿಗಳ ನಿರಂತರ ಕಿರುಕುಳ ಕಾರಣ ಎಂದು ಹೇಳಲಾಗುತ್ತಿದೆ. 12 ವರ್ಷಗಳಿಂದಲೂ ಶಿವಕುಮಾರ್ ಕಂಡಕ್ಟರ್ – ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು.

ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಟ್ಟ ಬೆನ್ನಲ್ಲೇ ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ನೌಕರ ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

error: Content is protected !!