ತಾಲ್ಲೂಕಿನ ಕಾಗಲವಾಡಿ ಮೋಳೆಯ ಕುಮಾರ್ (28), ಶಿವರಾಜು (35) ಹಾಗೂ ಸಿದ್ದರಾಜು (27) ಮೃತಪಟ್ಟವರು. ನಟಿ ಕಂಗನಾಗೆ ಪದ್ಮಶ್ರೀ ಪ್ರಶಸ್ತಿ : ಹಿರಿಯ ತೆಲುಗು ನಟಿ ಜಯಸುಧಾ ಅಸಮಾಧಾನ
ಈ ವರ್ಷದ ಮಾರ್ಚ್ 4ರಂದು ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯಲ್ಲಿ ಬಿಳಿಕಲ್ಲು ಕ್ವಾರಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆಯ ನೆನಪು ಇನ್ನೂ ಹಸಿಯಾಗಿರುವಾಗಲೇ ಜಿಲ್ಲೆಯಲ್ಲಿ ಮತ್ತೊಂದು ದುರಂತ ನಡೆದಿದೆ.
ಬಿಸಿಲವಾಡಿ ಗ್ರಾಮದ ಸರ್ವೆ ನಂಬರ್ 172ರಲ್ಲಿ ಈ ಕ್ವಾರಿ ಇದೆ. ರೇಣುಕಾದೇವಿ ಎಂಬುವವರು ಕ್ವಾರಿ ನಡೆಸುತ್ತಿದ್ದಾರೆ. 3 ಎಕರೆ ಜಾಗದಲ್ಲಿ ಗಣಿಗಾರಿಕೆ ನಡೆಸಲು ಅವರು ಪರವಾನಗಿ ಪಡೆದಿದ್ದಾರೆ. ಕ್ವಾರಿಯೂ 250 ಅಡಿಗೂ ಹೆಚ್ಚು ಆಳ ಹೊಂದಿದೆ.
ಗಣಿಯಲ್ಲಿ 12 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಕಾರ್ಮಿಕರೊಬ್ಬರು ಕ್ವಾರಿಯ ಗೋಡೆಗೆ ಹತ್ತಿ, ಮಧ್ಯದಲ್ಲಿ ಕಂಪ್ರೆಸರ್ ಬಳಸಿ ಕುಳಿ ತೆಗೆಯುತ್ತಿದ್ದರು. ಇನ್ನಿಬ್ಬರು ಕೆಳಗಡೆ ನಿಂತು ಅವರಿಗೆ ಸಹಾಯ ಮಾಡುತ್ತಿದ್ದರು. ಕುಳಿ ಮಾಡುವ ಸಂದರ್ಭದಲ್ಲಿ ಉಂಟಾಗುವ ಕಂಪನದಿಂದಾಗಿ ಮೇಲ್ಭಾಗದಲ್ಲಿರುವ ಕಲ್ಲಿನ ತುಂಡುಗಳು ಸಡಿಲಗೊಂಡು ಕುಸಿದಿವೆ.
ಈ ಸಂದರ್ಭದಲ್ಲಿ ಮೇಲಿದ್ದ ಕಾರ್ಮಿಕ ಕೆಳಗಡೆ ಬಿದ್ದಿದ್ದಾರೆ. ಕಲ್ಲು ಬಂಡೆಗಳು ಕೆಳಗಡೆ ಇದ್ದ ಇಬ್ಬರ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ಕುಮಾರ್ ಹಾಗೂ ಶಿವರಾಜು ಸ್ಥಳದಲ್ಲೇ ಮೃತಪಟ್ಟಿದ್ದರೆ, ಚಿಂತಾಜನಕ ಸ್ಥಿತಿಯಲ್ಲಿದ್ದ ಸಿದ್ದರಾಜು ಅವರನ್ನು ಸ್ಥಳೀಯರು ಹಾಗೂ ಪೊಲೀಸರು ಮೇಲಕ್ಕೆ ತಂದು ಜಿಲ್ಲಾಸ್ಪತ್ರೆಗೆ ಕರೆದೊಯ್ದರು. ಆದರೆ, ದಾರಿ ಮಧ್ಯೆಯೇ ಅವರು ಮೃತಪಟ್ಟರು.
ನಿಯಮ ಉಲ್ಲಂಘನೆ:
ಕ್ವಾರಿಗೆ ಪರವಾನಗಿ ಇದ್ದರೂ, ಮಿತಿಗಿಂತ ಹೆಚ್ಚು ಆಳ ಮಾಡಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಗಣಿ 250–300 ಅಡಿಗಳಷ್ಟು ಆಳ ಇದೆ. ಗ್ರಾಮದಲ್ಲಿ ಇನ್ನೂ ಒಂದು ಕ್ವಾರಿ ನಡೆಯುತ್ತಿದೆ. ವರ್ಷದಿಂದಲೂ ಗಣಿ ಇಲಾಖೆ, ಅರಣ್ಯ ಇಲಾಖೆಗೆ ಮನವಿ ಕೊಟ್ಟು ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಆದರೆ, ಯಾರೂ ಗಮನಹರಿಸಿಲ್ಲ. ಈ ಘಟನೆಗೆ ಗಣಿ ಇಲಾಖೆ ಅಧಿಕಾರಿಗಳು, ಗಣಿ ಮಾಲೀಕರೇ ಕಾರಣ’ ಎಂದು ಗ್ರಾಮಸ್ಥ ರವಿ ಅವರು ದೂರಿದರು.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment