ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿ ಸರ್ಕಾರಿ ಪ್ರಾಥಮಿಕ ಶಾಲ ಆವರಣದಲ್ಲಿ ಘಟನೆ ನಡೆದಿದೆ.ಸೈಕಲ್ ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ!
ಕರೇನಹಳ್ಳಿಯ ನಾಗೇಂದ್ರಪ್ರಸಾದ್ (25) ಮೃತಪಟ್ಟಿದ್ದಾರೆ, ಸಾವಿನ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ.
ಯುವಕ ಮರಕ್ಕೆ ಪಂಚೆಕಟ್ಟಿ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದಾನೆ. ಅಷ್ಟರಲ್ಲೇ ಪಂಚೆ ಹರಿದು ಯುವಕ ಕೆಳಗೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿದೆ. ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ
ಮೃತನ ಸಂಬಂಧಿಕರು ಸ್ಥಳ ಆಗಮಿಸಿದ್ದು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಸಮಸ್ಯೆ ಏನೂ ಇರಲಿಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ