ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ಜರುಗಿದೆ.
ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮ ಪಂಚಾಯತಿ ಅಧ್ಯಕ್ಷೆ, ದಡದಪುರ ಗ್ರಾಮದ ಮುತ್ತಮ್ಮ(45), ಮಗಳು ಬಸಮ್ಮಣಿ(30), ಮಗ ವೆಂಕಟೇಶ(25), ಬಸಮ್ಮಣಿ ಅವರ ಮಕ್ಕಳಾದ 8 ವರ್ಷದ ಚಾಮುಂಡೇಶ್ವರಿ, 2 ವರ್ಷದ ಗಂಡು ಮಗು ಮೃತಪಟ್ಟಿದ್ದಾರೆ ಈ ಘಟನೆಯಲ್ಲಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ದೇವಸ್ಥಾನವೊಂದಕ್ಕೆ ಮುತ್ತಮ್ಮ ಮತ್ತು ಕುಟುಂಬದ ಸದಸ್ಯರು ಭೇಟಿ ನೀಡಿ ಮದ್ದೂರು ಕಡೆಯಿಂದ ಆಟೋದಲ್ಲಿ ವಾಪಸ್ ಆಗುತ್ತಿದ್ದರು.
ಇದೇ ವೇಳೆ ಮಳವಳ್ಳಿಯಿಂದ ಮದ್ದೂರಿನತ್ತ ತೆರಳುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿಯೇ ಮುತ್ತಮ್ಮ ಸೇರಿದಂತೆ ಮೃತಪಟ್ಟರೆ, ಇನ್ನಿಬ್ಬರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!