Categories: Main News

ಮೆಟ್ರೋ ಮಾದರಿಯಲ್ಲಿ ಮೈಸೂರು ಬೆಂಗಳೂರು ನಡುವೆ ಪ್ರತಿ 10 ನಿಮಿಷಕ್ಕೊಮ್ಮೆ ರೈಲು

ಬೆಂಗಳೂರು : ರೈಲ್ವೆ ಮಂಡಳಿಯು ಬೆಂಗಳೂರು ಮತ್ತು ಮೈಸೂರು ನಡುವೆ ಪ್ರತಿ 10 ನಿಮಿಷಗಳಿಗೊಮ್ಮೆ ರೈಲು (Train) ಸಂಚಾರ ನಡೆಸುವ ಬಗ್ಗೆ ನಿರ್ಧಾರ ಕೈಗೊಂಡಿದೆ ಎಂಬ ವರದಿ ತಿಳಿದು ಬಂದಿದೆ .

ಇದು ಆರ್ಥಿಕ ಬೆಳವಣಿಗೆ ಉತ್ತೇಜಿಸುವ ಮತ್ತು ಪ್ರಯಾಣ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಯಾಣಿಕರಿಗೆ ಉಭಯ ನಗರಗಳ ನಡುವೆ ತ್ವರಿತ , ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಅನುಭವ ದೊರೆಯಲಿದೆ. ಈ ಮಾರ್ಗದಲ್ಲಿ ಪ್ರಸ್ತಾವಿತ ಮೆಟ್ರೋ ಮಾದರಿಯ ರೈಲು ಸಂಚಾರ ವ್ಯವಸ್ಥೆಗೆ ಅಸ್ತಿತ್ವದಲ್ಲಿರುವ ಟ್ರ್ಯಾಕ್‌ಗಳನ್ನು ಹೆಚ್ಚಿಸಬೇಕಾಗಿದೆ.

ಬೆಂಗಳೂರು-ಮೈಸೂರು , ಬಂಗಾರಪೇಟೆ-ಜೋಲಾರಪೇಟೆ ,ಬೆಂಗಳೂರು-ತುಮಕೂರು ವಿಭಾಗಗಳಲ್ಲಿ ರೈಲು ಹಳಿಯ ಚತುಷ್ಪಥ ಕಾಮಗಾರಿಗೆ ಅಂತಿಮ ಸ್ಥಳ ಸಮೀಕ್ಷೆಗೆ ರೈಲ್ವೆ ಮಂಡಳಿ ಗ್ರೀನ್ ಸಿಗ್ನಲ್ ನೀಡಲಾಗಿದೆ .

ಈ ಯೋಜನೆ ಪೂರ್ಣಗೊಂಡ ನಂತರ ಮೈಸೂರು-ಬೆಂಗಳೂರು ಮತ್ತು ಮೈಸೂರು ಇತರ ಸ್ಥಳಗಳಿಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ.

ಅಸ್ತಿತ್ವದಲ್ಲಿರುವ ಹಳಿಗಳ ಜೊತೆಗೆ ಈ ಯೋಜನೆಗಾಗಿ ಹೆಚ್ಚುವರಿ ಹಳಿಗಳನ್ನು ನಿರ್ಮಿಸಲಾಗುತ್ತದೆ. ರೈಲ್ವೆ ಮಂಡಳಿ ಅಧಿಕಾರಿಗಳು ಏಕಕಾಲದಲ್ಲಿ ವಿದ್ಯುದ್ದೀಕರಣ ಕಾಮಗಾರಿಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ .ರಾಜಸ್ಥಾನದಲ್ಲಿ 5ನೇ ಆರೋಪಿ ಲಲಿತ್ ಝಾ ಪತ್ತೆ

ಬೆಂಗಳೂರು ನಗರ ಮತ್ತು ಉಪ ನಗರಗಳ ನಡುವೆ ಪ್ರಯಾಣಿಕರ ಸಂಚಾರ ಸಂಪರ್ಕವನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ. ಉಭಯ ನಗರಗಳ ನಡುವಣ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸುವಲ್ಲಿ ಈ ರೈಲು ಯೋಜನೆಯು ಮಹತ್ವದ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗುತ್ತಿದೆ .

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024