ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರದಲ್ಲಿ ಮತ್ತೊಮ್ಮೆ ಬದಲಾವಣೆ ಮಾಡಿದ್ದು, 6 ಮಂದಿ ಕೆಎಎಸ್ (ಕರ್ನಾಟಕ ಆಡಳಿತ ಸೇವೆ) ಅಧಿಕಾರಿಗಳನ್ನು ಸ್ಥಳಾಂತರಿಸಿ ಹೊಸ ಆದೇಶವನ್ನು ಹೊರಡಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಸ್ಥಳಾಂತರವು ತಕ್ಷಣ ಜಾರಿಗೆ ಬರುವಂತೆ ಸೂಚಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಹುದ್ದೆಗಳ ಪಟ್ಟಿಯನ್ನು ನಿಗದಿಪಡಿಸಲಾಗಿದೆ.
ಸ್ಥಳಾಂತರಗೊಂಡ ಅಧಿಕಾರಿಗಳ ವಿವರ:
ಡಾ. ಷಣ್ಮುಖ ಡಿ
- ಕೆಎಎಸ್ (ಸೂಪರ್ ಟೈಮ್ ಸ್ಕೇಲ್) ಅಧಿಕಾರಿ
- ಸ್ಥಾನ: ಸ್ಥಳ ನಿರೀಕ್ಷಣೆ
ಅಶೋಕ್ ದುಡಗುಂಟಿ
- ಕೆಎಎಸ್ (ಸೂಪರ್ ಟೈಮ್ ಸ್ಕೇಲ್) ಅಧಿಕಾರಿ
- ಸ್ಥಾನ:ಸ್ಥಳ ನಿರೀಕ್ಷಣೆ
ಮಲ್ಲಿಕಾರ್ಜುನ ಬಿ
- ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ
- ಹುದ್ದೆ: ವಿಶೇಷ ಭೂಸ್ವಾಧೀನ ಅಧಿಕಾರಿ, ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಹೆಬ್ಬಾಳ, ಬೆಂಗಳೂರು
ಕೆ. ರಂಗನಾಥ
- ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ
- ಹುದ್ದೆ: ಆಯುಕ್ತರು, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ, ಹಂಪಿ, ವಿಜಯನಗರ ಜಿಲ್ಲೆ, ಹೊಸಪೇಟೆ
ಶೈಲಜಾ ಎಸ್
- ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ
-ಸ್ಥಾನ: ಸ್ಥಳ ನಿರೀಕ್ಷಣೆ
ಜಯಲಕ್ಷ್ಮೀ
- ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ
- ಹುದ್ದೆ: ಕುಲಸಚಿವರು, ಕರ್ನಾಟಕ ಕೃಷಿ ವಿಶ್ವವಿದ್ಯಾಲಯ, ಧಾರವಾಡ
ಈ ಎಲ್ಲಾ ಸ್ಥಳಾಂತರಗಳು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದ್ದು, ಅಧಿಕಾರಿಗಳು ತಮ್ಮ ಹೊಸ ಹುದ್ದೆಗಳಿಗೆ ಆಯ್ಕೆಯಾದ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸಬೇಕಾಗಿ ಕೋರಲಾಗಿದೆ. ಇದನ್ನು ಓದಿ –ಮೈಸೂರು ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜಿಗೆ ರಜೆ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು