October 23, 2024

Newsnap Kannada

The World at your finger tips!

WhatsApp Image 2022 08 24 at 7.17.11 PM

8 ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು:ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಘೋಷಣೆಯಾದ ನಂತರ ರಾಜ್ಯ ಸರ್ಕಾರ ಆಡಳಿತ ಯಂತ್ರವನ್ನು ಚುರುಕುಗೊಳಿಸಲು 8 ಐಎಎಸ್‌ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರದ ಈ ಅಧಿಸೂಚನೆ ಪ್ರಕಾರ, ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮನೋಜ್‌ ಜೈನ್‌ (ಐಎಎಸ್‌ 2006) ಅವರನ್ನು ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿ ಹುದ್ದೆಯ ಉಸ್ತುವಾರಿಯಲ್ಲಿ ನಿಯೋಜಿಸಲಾಗಿದೆ.

ರಮಣದೀಪ್‌ ಚೌಧರಿ (ಐಎಎಸ್‌ 2008) ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಿದ್ದು, ಸುಶಮಾ ಗೋಡಬೋಲೆ (ಐಎಎಸ್‌ 2008) ಅವರನ್ನು ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ನಿತೇಶ್‌ ಪಾಟೀಲ್‌ (ಐಎಎಸ್‌ 2012) ಅವರನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರ ಹುದ್ದೆಗೆ, ಬಸವರಾಜೇಂದ್ರ ಎಚ್‌ (ಐಎಎಸ್‌ 2012) ಅವರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಲೋಖಂಡೆ ಸ್ನೇಹಲ್ ಸುಧಾಕರ್‌ (ಐಎಎಸ್‌ 2017) ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ಜಂಟಿ ನಿಯಂತ್ರಕರಾಗಿ, ಬಸವರಾಜು ಎ.ಬಿ. (ಐಎಎಸ್‌ 2017) ಅವರನ್ನು ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.ಇದನ್ನು ಓದಿ –ಸಿ.ಪಿ ಯೋಗೇಶ್ವರ್ ರಿಂದ ಬಿಜೆಪಿಗೆ ದ್ರೋಹ : ಅಶೋಕ್

ಇನ್ನು ರಂಗಪ್ಪ ಎಸ್‌. (ಐಎಎಸ್‌ 2017) ಅವರನ್ನು ಬೆಂಗಳೂರಿನ ಹಣಕಾಸು ನೀತಿ ಸಂಸ್ಥೆಯ ಹೆಚ್ಚುವರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!