Trending

ಮಳವಳ್ಳಿ ಸರ್ಕಾರಿ ಶಾಲೆ ಶಿಕ್ಷಕರೊಬ್ಬರ ವರ್ಗಾವಣೆ: ಬಿಕ್ಕಿ,ಬಿಕ್ಕಿ ಅತ್ತ ವಿದ್ಯಾರ್ಥಿಗಳು

ಸರ್ಕಾರಿ ಶಾಲೆ ಶಿಕ್ಷಕರೊಬ್ಬರ ವರ್ಗಾವಣೆಯಿಂದಾಗಿ ವಿದ್ಯಾರ್ಥಿಗಳು ಕಣ್ಣೀರಿಟ್ಟ ಪ್ರಸಂಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯಲ್ಲಿ ಜರುಗಿದೆ.

ಭೀಮನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಪುಟ್ಟರಾಜು ವರ್ಗಾವಣೆಯಾಗಿರುವ ಮುಖ್ಯ ಶಿಕ್ಷಕರ ನಿರ್ಗಮನವನ್ನು ಸಹಿಸಲಾರದ ವಿದ್ಯಾರ್ಥಿಗಳ ಸಮೂಹ ಬಿಕ್ಕಿ ಅತ್ತರು.

ಹಲವು ವರ್ಷಗಳಿಂದ ಭೀಮನಹಳ್ಳಿಯ ಶಾಲೆಯಲ್ಲಿ ಶಿಕ್ಷಕರಾಗಿದ್ದ ಪುಟ್ಟರಾಜು ಅವರನ್ನು ಸದ್ಯ ಮಂಡ್ಯದ ಡಯಟ್‌ಗೆ ವರ್ಗಾವಣೆ ಮಾಡಲಾಗಿದೆ. ನದಿ ತೀರದಲ್ಲಿ ಪಟಾಕಿ ನೆಪದಲ್ಲಿ ಬಾಂಬ್ ಸಿಡಿಸಿ ಪ್ರಯೋಗ ಮಾಡುತ್ತಿದ್ದ ಉಗ್ರ ಯಾಸಿನ್

ಶಿಕ್ಷಕರ ವರ್ಗಾವಣೆಯಿಂದ ಕಣೀರಿಡುತ್ತಿರುವ ವಿದ್ಯಾರ್ಥಿಗಳು ಕಾಲಿಗೆ ಬಿದ್ದು ಶಾಲೆ ಬಿಟ್ಟು ಹೋಗಬೇಡಿ ಎಂದು ಬೇಡಿಕೊಂಡರು ಮಕ್ಕಳ‌ ಜೊತೆಗೆ ಶಿಕ್ಷಕರೂ , ಪೋಷಕರು ಕೂಡ ಕಾಲಿಗೆ ಬಿದ್ದು ಬೀಳ್ಕೊಟ್ಟರು.

ಅಕ್ರಮ ಆಸ್ತಿ ಗಳಿಕೆ – ನಿವೃತ್ತ RTO ಅಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ, 63 ಲಕ್ಷ ರು ದಂಡ

ಅಕ್ರಮ ಆಸ್ತಿ ಗಳಿಕೆ ಮಾಡಿದ್ದ ನಿವೃತ್ತ ಸಾರಿಗೆ ಅಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 63 ಲಕ್ಷ ರು ದಂಡವನ್ನು ವಿಧಿಸಿ ಬೆಳಗಾವಿಯ ಲೋಕಾಯುಕ್ತ ನ್ಯಾಯಾಲಯ ತೀರ್ಪು ನೀಡಿದೆ.

ಕೋಲಾರ ಮೂಲದ ಬೆಳಗಾವಿಯ ಆಂಜನೇಯ ನಗರ ನಿವಾಸಿ ಪಿ. ಶಾಂತಕುಮಾರ್ ಶಿಕ್ಷೆಗೆ ಒಳಗಾದವರು.

ಬೀದರ್ (Bidar) ಜಿಲ್ಲೆಯ ಹುಮನಾಬಾದ್ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಆಗಿದ್ದಾಗ ಅಕ್ರಮವಾಗಿ ಅಪಾರ ಆಸ್ತಿ ಸಂಪಾದಿಸಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಅಂದಿನ ಬೆಳಗಾವಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆರ್. ಕೆ ಪಾಟೀಲ್ 2010ರ ಮೇ 3 ರಂದು ಪ್ರಕರಣ ದಾಖಲಿಸಿದ್ದರು.

ಖಚಿತ ಮಾಹಿತಿ ಮೇರೆಗೆ ಬೆಳಗಾವಿಯ ಆಂಜನೇಯ ನಗರದಲ್ಲಿದ್ದ ಶಾಂತಕುಮಾರ್ ಮನೆ ಹಾಗೂ ಹುಮನಾಬಾದ್ ಕಚೇರಿ ಮೇಲೆ ಅಧಿಕಾರಿಗಳು ನಡೆಸಿದ್ದ ದಾಳಿ ವೇಳೆ 1.14 ಕೋಟಿ ಆಸ್ತಿ ಸಿಕ್ಕಿತ್ತು. ಘಟನೆಗೆ ಸಂಬಂಧಿಸಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿದ್ದ ಆರ್.ಬಿ. ಹವಾಲ್ದಾರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದವನ್ನು ನ್ಯಾಯಾಧೀಶ ಮೋಹನ ಪ್ರಭು ಆಲಿಸಿದ್ದರು. ಇದರಲ್ಲಿ 63 ಲಕ್ಷ ರೂ. ಹಣವನ್ನು ಭ್ರಷ್ಟಾಚಾರದ ಹಾಗೂ ಅಕ್ರಮವಾಗಿ ಸಂಪಾದಿಸಿದ್ದಾರೆ ಎನ್ನುವುದು ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಶಾಂತಕುಮಾರ್‌ಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 63 ಲಕ್ಷ ದಂಡ ವಿಧಿಸಿ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024