February 21, 2026

Newsnap Kannada

The World at your finger tips!

WhatsApp Image 2022 08 24 at 7.17.11 PM

ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು : ಕರ್ನಾಟಕ ಸರ್ಕಾರವು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆಯನ್ನು ಕೈಗೊಂಡಿದೆ. ಈ ಬದಲಾವಣೆಗಳ ಭಾಗವಾಗಿ, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಬಿ. ಬಿ. ಕಾವೇರಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಾ. ತ್ರಿಲೋಕ್‌ ಚಂದ್ರ ಕೆ. ವಿ. ಅವರನ್ನು ನೇಮಕ ಮಾಡಲಾಗಿದೆ.

ಶನಿವಾರ ರಾಜ್ಯಪಾಲರ ಆದೇಶದಂತೆ, ಟಿ. ಮಾಲತೇಶ್, ಸರ್ಕಾರದ ಅಧೀನ ಕಾರ್ಯದರ್ಶಿ (ಸೇವೆಗಳು-1), ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಬದಲಾವಣೆಗಳು ತಕ್ಷಣದಿಂದ ಜಾರಿಗೆ ಬರುವಂತಾಗಿವೆ.

ವರ್ಗಾವಣೆಗೊಂಡ ಪ್ರಮುಖ ಅಧಿಕಾರಿಗಳು:

  • ಡಾ. ತ್ರಿಲೋಕ್‌ ಚಂದ್ರ ಕೆ. ವಿ. (2007 ಬ್ಯಾಚ್): ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
  • ಬಿ. ಬಿ. ಕಾವೇರಿ (2008 ಬ್ಯಾಚ್): ಅವರು ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ವರ್ಗಾವಣೆಯಾಗಿದ್ದಾರೆ. ಇದರೊಂದಿಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಹೊಣೆ ಸಹ ಅವರಿಗೆ ನೀಡಲಾಗಿದೆ.

ಇದನ್ನು ಓದಿ – ನವೆಂಬರ್‌ನಲ್ಲಿ KSRTC ಬಸ್‌ಗಳಲ್ಲಿ ‘ಕ್ಯಾಶ್‌ಲೆಸ್ ವ್ಯವಸ್ಥೆ’ ಜಾರಿ

ಈ ಅಧಿಕಾರಿಗಳ ವರ್ಗಾವಣೆ, ರಾಜ್ಯದ ಆಡಳಿತಾತ್ಮಕ ವ್ಯವಸ್ಥೆಯ ಸುಧಾರಣೆಯ ಭಾಗವಾಗಿದೆ.

error: Content is protected !!