7 ಐಎಎಸ್ ಅಧಿಕಾರಿಗಳ ವರ್ಗಾವಣೆ : ಅಜಯ್ ನಾಗಭೂಷಣ್, ಶಿಖಾ ಸ್ಥಾನ ಪಲ್ಲಟ

Team Newsnap
1 Min Read

ರಾಜ್ಯ ಸರ್ಕಾರ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಚುನಾವಣಾ ಆಯೋಗದ ಉನ್ನತ ಹುದ್ದೆಯಲ್ಲಿ ಇದ್ದ ಡಾ. ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಬಿಎಂಟಿಸಿ ಎಂಡಿ ಸಿ ಶಿಖಾ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಗಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.‌

  • ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ
  • ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ,
  • ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ,
  • ಕನಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ,
  • ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,
  • ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ.
  • ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Share This Article
Leave a comment