ಸಾರಿಗೆ ನೌಕರರ ಮುಷ್ಕರ ಹಿಂದಕ್ಕೆ ತೆಗೆದುಕೊಳ್ಳಲು ಸರ್ಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ.
ವಿವಿಧ ನಿಗಮಗಳ ಸಾರಿಗೆ ನೌಕರರನ್ನು ಅಧಿಕಾರಿಗಳು ವರ್ಗಾವಣೆ ಮಾಡಿ ಚಿತ್ರದುರ್ಗ, ಮೈಸೂರು, ಮಂಡ್ಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ವರ್ಗಾವಣೆ ಮಾಡಲಾಗಿದೆ.
ಆಡಳಿತಾತ್ಮಕ ಕಾರಣ ನೀಡಿ ಸಾರಿಗೆ ನೌಕರರನ್ನು ವರ್ಗಾವಣೆ ಮಾಡಿ, ಚಿತ್ರದುರ್ಗ ವಿಭಾಗದಲ್ಲಿ 10 ಸಾರಿಗೆ ನೌಕರರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಮಂಡ್ಯ ವಿಭಾಗದ 14 ನೌಕರರು ಹಾಗೂ ಮೈಸೂರು ವಿಭಾಗದ 33 ನೌಕರರಿಗೂ ವರ್ಗಾವಣೆ ನೀಡಲಾಗಿದೆ.
ಮೈಸೂರಿನಿಂದ ಮಂಗಳೂರು, ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದಾಗಿ ತಿಳಿದುಬಂದಿದೆ. ಮುಷ್ಕರದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆಯಾದರೂ ವರ್ಗಾವಣೆಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಕಾರಣ ನೀಡಲಾಗಿದೆ.
ಈ ಮಧ್ಯೆ, ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳ ಯಾವ ಆದೇಶಕ್ಕೂ ಜಗ್ಗದ ನೌಕರರು ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ.
ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಈ ನಡುವೆ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಇಂದು ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರು ಸಭೆ ನಡೆಸಲಿದ್ದಾರೆ. ಯಾವ ರೀತಿ ಮುಷ್ಕರವನ್ನು ಮುಂದುವರೆಸಬೇಕೆಂದು ತೀರ್ಮಾನಿಸಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ