ಮಂಡ್ಯ, ಮೈಸೂರು, ಚಿತ್ರದುರ್ಗದ ಕೆಲವು ಸಾರಿಗೆ ನೌಕರರ ವರ್ಗಾವಣೆ

Team Newsnap
1 Min Read
Free bus pass - only up to 50 K.M from home ? ಉಚಿತ ಬಸ್ ಪಾಸ್ - ಮನೆಯಿಂದ 50 K.M ವರೆಗೆ ಮಾತ್ರ ?

ಸಾರಿಗೆ ನೌಕರರ ಮುಷ್ಕರ ಹಿಂದಕ್ಕೆ ತೆಗೆದುಕೊಳ್ಳಲು ಸರ್ಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ.

ವಿವಿಧ ನಿಗಮಗಳ ಸಾರಿಗೆ ನೌಕರರನ್ನು ಅಧಿಕಾರಿಗಳು ವರ್ಗಾವಣೆ ಮಾಡಿ ಚಿತ್ರದುರ್ಗ, ಮೈಸೂರು, ಮಂಡ್ಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ವರ್ಗಾವಣೆ ಮಾಡಲಾಗಿದೆ.

ಆಡಳಿತಾತ್ಮಕ ಕಾರಣ ನೀಡಿ ಸಾರಿಗೆ ನೌಕರರನ್ನು ವರ್ಗಾವಣೆ ಮಾಡಿ, ಚಿತ್ರದುರ್ಗ ವಿಭಾಗದಲ್ಲಿ 10 ಸಾರಿಗೆ ನೌಕರರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಮಂಡ್ಯ ವಿಭಾಗದ 14 ನೌಕರರು ಹಾಗೂ ಮೈಸೂರು ವಿಭಾಗದ 33 ನೌಕರರಿಗೂ ವರ್ಗಾವಣೆ ನೀಡಲಾಗಿದೆ.

ಮೈಸೂರಿನಿಂದ ಮಂಗಳೂರು, ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದಾಗಿ ತಿಳಿದುಬಂದಿದೆ. ಮುಷ್ಕರದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆಯಾದರೂ ವರ್ಗಾವಣೆಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಕಾರಣ ನೀಡಲಾಗಿದೆ.

ಈ ಮಧ್ಯೆ, ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳ ಯಾವ ಆದೇಶಕ್ಕೂ ಜಗ್ಗದ ನೌಕರರು ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ.
ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಈ ನಡುವೆ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಇಂದು ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರು ಸಭೆ ನಡೆಸಲಿದ್ದಾರೆ.‌ ಯಾವ ರೀತಿ ಮುಷ್ಕರವನ್ನು ಮುಂದುವರೆಸಬೇಕೆಂದು ತೀರ್ಮಾನಿಸಲಿದ್ದಾರೆ.

Share This Article
Leave a comment