ಸಾರಿಗೆ ಮುಷ್ಕರಕ್ಕೆ ನೌಕರರು ಅಂತ್ಯ ಹಾಡಿ ನಿನ್ನೆ ಸಂಜೆಯಿಂದಲೇ ಬಸ್ ಸಂಚಾರ ಆರಂಭಿಸಿದರು.
ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ಎಲ್ಲಾ ಬಸ್ ನಿಲ್ದಾಣ ಗಳಿಂದಲೂ ಸಂಚಾರ ಆರಂಬಾವಾಗಿದೆ. ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರಿನಿಂದ ಹೊರಡುವ ಮತ್ತು ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಬರುವ ಬಸ್ ಎಂದಿನಂತೆ ಸಂಚಾರ ಶುರುವಾಗಿದೆ. ಆಲ್ಲದೇ ರಾಜ್ಯದ 4 ನಿಗಮಗಳ ಬಸ್ ಗಳ ಸಂಚಾರ ಕೂಡ ನಿರಾತಂಕವಾಗಿದೆ.
ಕಳೆದ ನಾಲ್ಕು ದಿನಗಳ ಮುಷ್ಕರ ದಿಂದಾಗಿ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಿಗೆ ಅಂದಾಜು 53 ಕೋಟಿ ನಷ್ಟ ಉಂಟಾಗಿದೆ.
53 ಕೋಟಿ ರು. ನಷ್ಟ
ಕೆಎಸ್ ಆರ್ ಟಿಸಿ ಗೆ 16 ಕೋಟಿ,
ಬಿಎಂಟಿಸಿ ಗೆ 8.4 ಕೋಟಿ,
ಎನ್ ಡಬ್ಲೂ ಕೆ ಆರ್ ಟಿಸಿ14 ಕೋಟಿ ಹಾಗೂ ಎನ್ ಇ ಕೆ ಎಸ್ ಆರ್ ಟಿ 15 ಕೋಟಿ ರು ನಷ್ಟ ವಾಗಿದೆ ಎಂದು ಹೇಳಲಾಗಿದೆ. ಅಲ್ಲದೆ 50 ಕ್ಕೂ ಹೆಚ್ಚು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದರಿಂದ ಆ ನಷ್ಟವನ್ನು ಕೂಡ. ಲೆಕ್ಕಕ್ಕೆ ತೆಗೆದುಕೊಳ್ಳಬೇಕಾಗಿದೆ.
ಈ ನಡುವೆ ಸರ್ಕಾರ ಸಾರಿಗೆ ನೌಕರರ 10 ಬೇಡಿಕೆಗಳ ಪೈಕಿ 9 ಬೇಡಿಕೆ ಒಪ್ಪಿಕೊಂಡಿರುವ ಕಾರಣಕ್ಕಾಗಿ ನೌಕರರು ಖುಷಿಯಾಗಿದ್ದಾರೆ.
ಈ ನಡುವೆ ಮೂರು ತಿಂಗಳಲ್ಲಿ ಎಲ್ಲಾ ಬೇಡಿಕೆಗಳು ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಗಡುವು ಕೂಡ ನೀಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ