February 23, 2026

Newsnap Kannada

The World at your finger tips!

kodi police

ಸಾರಿಗೆ ನೌಕರರ ಮುಷ್ಕರ ತೀವ್ರ ಸಾಧ್ಯತೆ: ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸ್ ವಶಕ್ಕೆ

Spread the love

ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನು ಪೊಲೀಸರು ಬೆಳಗಾವಿಯಲ್ಲಿ ವಶಕ್ಕೆ ಪಡೆದುಕೊಡಿದ್ದಾರೆ.

ಮಿಲನ್ ಹೋಟೆಲ್ ಬಳಿ ಮುಂಜಾಗೃತ ಕ್ರಮವಾಗಿ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನ ವಶಕ್ಕೆ ಪಡೆಯಲಾಗಿದೆ.

6ನೇ ವೇತನ ಆಯೋಗ ಜಾರಿ ಮಾಡಬೇಕೆಂದು ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯಾದ್ಯಂತ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸಲು ಸಾರಿಗೆ ನೌಕರರ ಮುಖಂಡರು ತಯಾರಿ ನಡೆಸಿದ್ದಾರೆ. ಇದರ ಮುಂದುವರಿದ ಭಾಗವಾಗಿ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಳಗಾವಿ ಹಾಗೂ ಕಲಬುರಗಿಯಲ್ಲಿ ಅವರು ಸಾರಿಗೆ ಮುಖಂಡರು ಹಾಗೂ ನೌಕರರ ಜೊತೆ ಸಭೆ ನಡೆಸಲು ತೆರಳಿದ್ದರು.

12 ಗಂಟೆಗೆ ಸಭೆ ನಡೆಯಬೇಕಿತ್ತು. ಆದರೆ ಪೊಲೀಸರು ಮುಂಜಾಗೃತ ಕ್ರಮವಾಗಿ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಡಿಹಳ್ಳಿಯನ್ನ ಪೊಲೀಸ್ ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

error: Content is protected !!