ರಾಜ್ಯ ಉಚ್ಚ ನ್ಯಾಯಾಲಯದ ಸೂಚನೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರವನ್ನು ಇಂದು ತಾತ್ಕಾಲಿಕವಾಗಿ ಅಂತ್ಯಗೊಳಿಸುತ್ತಿದ್ದೇವೆ. ನಾಳೆಯಿಂದ ಬಸ್ ಸಂಚಾರ ಸುಗಮವಾಗಲಿದೆ ಎಂದು ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರಕಟಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನಾವು ಸೇವೆಗೆ ಹಾಜರಾಗುತ್ತೇವೆ. ಸದ್ಯ ಮುಷ್ಕರವನ್ನು ಮುಂದೂಡುತ್ತೇವೆ. ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ ಎಂದರು.
ಕರ್ನಾಟಕದ ಉಚ್ಛ ನ್ಯಾಯಾಲಯ ಮಧ್ಯಪ್ರವೇಶ ಮಾಡಿದೆ. ನ್ಯಾಯಮೂರ್ತಿಗಳು ಹೇಳಿದ್ದನ್ನು ಗೌರವಿಸ್ತೀವಿ. ಸೇವೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ, ಜನರಿಗೆ ತೊಂದರೆ ನೀಡಬೇಡಿ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಹೀಗಾಗಿ ನ್ಯಾಯಾಲಯ ಆದೇಶ ಮಾಡಿದಂತೆ ನಾವು ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment