ಜನವರಿಯಲ್ಲಿ ದುರಂತಗಳ ಸರಮಾಲೆ ನಡೆದಿದೆ . ಭಾನುವಾರ ಕೂಡ
ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪಿದ್ದಾರೆ.
ಈ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಜರುಗಿದೆ.
ಬೆಳಗಾವಿಯಿಂದ ಸಾರಿಗೆ ಬಸ್ ಯರಹಟ್ಟಿಯಿಂದ ಬೆಳಗಾವಿಯತ್ತ ಹೊರಟಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ಅಪಘಾತದಲ್ಲಿ ಮಹಿಳಾ ಪಿ ಎಸ್ ಐ ಸಿಬ್ಬಂದಿ ಸೇರಿ ನಾಲ್ವರ ಸಾವನ್ನಪ್ಪಿದ್ದಾರೆಂದು ಗೊತ್ತಾಗಿದೆ.ಬೆಳಗಾವಿ ಸಹ್ಯಾದ್ರಿ ನಗರ ನಿವಾಸಿಗಳಾದ ಪಿಎಸ್ ಐ ಲಕ್ಷ್ಮೀ ಪವಾರ್, ಅಂಕಿತಾ ಪವಾರ್, ದೀಪಾ ಶಹಾಪುರಕರ್ , ಪ್ರಸಾದ್ ಪವಾರ್ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಮುರಗೋಡ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು