ಟಿಕೆಟ್ ಇಲ್ಲದೇ ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನು ಓದಿ –ಪೋಷಕರೇ ನನ್ನನ್ನು ಹತ್ಯೆ ಮಾಡುತ್ತಾರೆ – ಶಾಲಿನಿ ಪೊಲೀಸರಿಗೆ ಬರೆದ ಪತ್ರ, ಆಡಿಯೋ ಲಭ್ಯ
ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ. ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತಿದ್ದ ಮನೋಹರ್ ಸಿಂಗ್ನನ್ನು ಕಾರವಾರದ ಬಳಿ ರೈಲ್ವೆ ಪೊಲೀಸರು ದಂಡ ವಿಧಿಸಿದ್ದರು.
ಈ ವೇಳೆ ಅನುಮಾನಗೊಂಡ ರೈಲ್ವೆ ಪೊಲೀಸರು ಈತನ ಬಳಿ ಇದ್ದ ಬ್ಯಾಗ್ ಅನ್ನು ತಪಾಸಣೆಗೆ ಒಳಪಡಿಸಿದಾಗ ಈತನ ಬಳಿ ಇದ್ದ ಬ್ಯಾಗಿನಲ್ಲಿ 100 ಬಂಡಲ್ನ ಎರಡು ಕೋಟಿ ಹಣ ಪತ್ತೆಯಾಗಿದೆ.
ಮನೋಹರ್ ಸಿಂಗ್ ಮುಂಬೈನ ಭರತ್ ಬಾಯ್ ಅಲಿಯಾಸ್ ಪಿಂಟೊ ಎಂಬುವರ ಬಳಿ 15 ಸಾವಿರಕ್ಕೆ ಕೆಲಸ ಮಾಡುತಿದ್ದ.
ಮನೋಹರ್ ಸಿಂಗ್ ತನ್ನ ಮಾಲೀಕನಿಂದ ಬ್ಯಾಗ್ ಪಡೆದು ಮಂಗಳೂರಿನಲ್ಲಿ ರಾಜು ಎಂಬವರಿಗೆ ತಲುಪಿಸಲು ಮುಂಬೈನಿಂದ ಮಂಗಳೂರಿಗೆ ಹೊರಟಿದ್ದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ರೈಲ್ವೆ ಪೊಲೀಸರು ಆರೋಪಿಯನ್ನು ಕಾರವಾರ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ