ಕಳೆದ ರಾತ್ರಿ ಸುರಿದ ಭಾರೀ ಮಳೆ ಮತ್ತು ಗಾಳಿಯ ಪರಿಣಾಮ ಬೃಹತ್ ಮರವೊಂದು ದೇವಸ್ಥಾನದ ತಗಡಿನ ಶೆಡ್ ಮೇಲೆ ಉರುಳಿ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿ 30 ಮಂದಿ ಗಾಯಗೊಂಡಘಟನೆ ಮಾಹಾರಾಷ್ಟ್ರದ ಅಕೋಲಾ ಜಿಲ್ಲೆಯ ಬಾಲಾಪುರ್ ತೆಹಸಿಲ್ನ ಪಾರಸ್ ಗ್ರಾಮದ ದೇವಸ್ಥಾನದಲ್ಲಿ ನಡೆದಿದೆ.
ಪೂಜೆ ನಡೆಯುವ ವೇಳೆ ಅಲ್ಲಿನ ಬಾಬುಜಿ ಮಹರಾಜ್ ಮಂದಿರದ ಆವರಣದಲ್ಲಿದ್ದ ಬೃಹತ್ ಬೇವಿನ ಮರ ನೆಲಕಪ್ಪಳಿಸಿದೆ.
ಭಾರೀ ಗಾಳಿ, ಮಳೆಯಿಂದಾಗಿ ದೇವಸ್ಥಾನದ ತಗಡಿನ ಶೆಡ್ ಮೇಲೆ ಮರ ಉರುಳಿದೆ. ಮರ ಉರುಳಿ ಬಿದ್ದ ಪರಿಣಾಮ ಅದರಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಪೊಲೀಸರು ಮತ್ತು ಆ್ಯಂಬುಲೆನ್ಸ್ ಕೂಡಲೇ ಸ್ಥಳಕ್ಕಾಗಮಿಸಿ ಮರದಡಿ ಸಿಲುಕಿದವರನ್ನು ರಕ್ಷಣೆ ಮಾಡಿದ್ದಾರೆ. ಜೆಸಿಬಿ ಸಹಾಯದ ಮೂಲಕ ಶೆಡ್ ಅನ್ನು ತೆರವುಗೊಳಿಸಲಾಗಿದೆ.ಇದನ್ನು ಓದಿ –ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ : ವೈವಿಎಸ್ ದತ್ತ ಘೋಷಣೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು