ಕಳೆದ ರಾತ್ರಿ ಸುರಿದ ಭಾರೀ ಮಳೆ ಮತ್ತು ಗಾಳಿಯ ಪರಿಣಾಮ ಬೃಹತ್ ಮರವೊಂದು ದೇವಸ್ಥಾನದ ತಗಡಿನ ಶೆಡ್ ಮೇಲೆ ಉರುಳಿ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿ 30 ಮಂದಿ ಗಾಯಗೊಂಡಘಟನೆ ಮಾಹಾರಾಷ್ಟ್ರದ ಅಕೋಲಾ ಜಿಲ್ಲೆಯ ಬಾಲಾಪುರ್ ತೆಹಸಿಲ್ನ ಪಾರಸ್ ಗ್ರಾಮದ ದೇವಸ್ಥಾನದಲ್ಲಿ ನಡೆದಿದೆ.
ಪೂಜೆ ನಡೆಯುವ ವೇಳೆ ಅಲ್ಲಿನ ಬಾಬುಜಿ ಮಹರಾಜ್ ಮಂದಿರದ ಆವರಣದಲ್ಲಿದ್ದ ಬೃಹತ್ ಬೇವಿನ ಮರ ನೆಲಕಪ್ಪಳಿಸಿದೆ.
ಭಾರೀ ಗಾಳಿ, ಮಳೆಯಿಂದಾಗಿ ದೇವಸ್ಥಾನದ ತಗಡಿನ ಶೆಡ್ ಮೇಲೆ ಮರ ಉರುಳಿದೆ. ಮರ ಉರುಳಿ ಬಿದ್ದ ಪರಿಣಾಮ ಅದರಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಪೊಲೀಸರು ಮತ್ತು ಆ್ಯಂಬುಲೆನ್ಸ್ ಕೂಡಲೇ ಸ್ಥಳಕ್ಕಾಗಮಿಸಿ ಮರದಡಿ ಸಿಲುಕಿದವರನ್ನು ರಕ್ಷಣೆ ಮಾಡಿದ್ದಾರೆ. ಜೆಸಿಬಿ ಸಹಾಯದ ಮೂಲಕ ಶೆಡ್ ಅನ್ನು ತೆರವುಗೊಳಿಸಲಾಗಿದೆ.ಇದನ್ನು ಓದಿ –ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ : ವೈವಿಎಸ್ ದತ್ತ ಘೋಷಣೆ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ