ಈ ಬಾರಿಯ ತುಲಾ ಸಂಕ್ರಮಣದಲ್ಲಿ ಭಾಗಿಯಾಗಲು ಕೊಡಗಿನ ಮೂಲ ನಿವಾಸಿಗಳಿಗೆ ಮುಕ್ತ ಅವಕಾಶ ನೀಡಬೇಕು ಎಂದು “ಸೇವ್ ಕೊಡಗು ಫ್ರಮ್ ಟೂರಿಸ್ಟ್’ ತಂಡ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.
ಕಳೆದ ಬಾರಿ ಜಿಲ್ಲಾಡಳಿತದ ವೈಫಲ್ಯತೆಯಿಂದ ತುಲಾ ಸಂಕ್ರಮಣದ ಸಮಯದಲ್ಲಿ ಗೊಂದಲ ಉಂಟಾಯಿತು. ಇದರಿಂದ ಕೊಡಗಿನ ಮೂಲ ನಿವಾಸಿಗಳಿಗೆ ತುಂಬಾ ನೋವಾಗಿದೆ. ಮುಂಬರುವ ಅಕ್ಟೋಬರ್ನಲ್ಲಿ ನಡೆಯಲಿರುವ ಕೊಡಗಿನ ಈ ಸಾಂಪ್ರದಾಯಕ ಹಬ್ಬದಲ್ಲಿ ಈ ರೀತಿಯಾಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
ಹೊರಗಿನಿಂದ ಜಾತ್ರೆಗೆ ಬರುವ ಭಕ್ತರು ಕಡ್ಡಾಯವಾಗಿ ಮುಂಚೆಯೇ ಹೆಸರು ನೋಂದಾಯಿಸಿಕೊಳ್ಳಬೇಕು ಮತ್ತು ಕೋವಿಡ್ ನೆಗಟಿವ್ ವರದಿ ಇಟ್ಟುಕೊಂಡು ಪಾಲ್ಗೊಳ್ಳಲು ಅವಕಾಶ ನೀಡಬೇಕೆಂದು ತಂಡ ಕೋರಿದೆ.
ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಂಪೂರ್ಣ ಸ್ಥಗಿತಗೊಳಿಸಬೇಕೆಂದು, ಕೊಡಗಿನ ವಿವಿಧ ಸಂಘಟನೆಗಳು ಮತ್ತು ಸಮಾನಮನಸ್ಕರಿರುವ ಈ “ಸೇವ್ ಕೊಡಗು ಫ್ರಮ್ ಟೂರಿಸ್ಟ್’ ತಂಡ ಒತ್ತಾಯಿಸಿದೆ.
ಈ ಬಗ್ಗೆ ಡಿಸಿ ಮತ್ತು ಎಸ್ಪಿಗೆ ಮನವಿ ಸಲ್ಲಿಸಿದೆ. ತುಲಾ ಸಂಕ್ರಮಣ ಮತ್ತು ಶಾಲಾ-ಕಾಲೇಜು ಪುನರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ಜನರ ಹಿತದೃಷ್ಟಿಯಿಂದ ಹಾಗೂ ಕೇರಳದಲ್ಲಿ ಕೋವಿಡ್ ಮತ್ತು ನಿಫಾ ವೈರಸ್ ಹೆಚ್ಚುತ್ತಿರುವ ಕಾರಣ ಗಡಿಗಳಿಂದ ಪ್ರವಾಸಿಗರು ಒಳಬಾರದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment