ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಂಕರಣ್ಣ(46) ಮೃತ ದುರ್ದೈವಿ, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಮದುವೆ ನಡೆದಿತ್ತು.
ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರ್ನಾಲ್ಕು ದಿನದಿಂದ ಗಂಡ, ಹೆಂಡತಿ ಜೊತೆ ಜಗಳ ನಡೆಯುತ್ತಿತ್ತು. ಹೀಗಾಗಿ ಕೋಪ ಮಾಡಿಕೊಂಡು ಸೋಮವಾರ ಮನೆ ಬಿಟ್ಟು ಹೋಗಿದ್ದ ಶಂಕರಣ್ಣನವರು, ಕುಣಿಗಲ್ ತಾಲೂಕಿನ ಅಕ್ಕಿಮರಿಪಾಳ್ಯದಲ್ಲಿದ್ದ ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
2021ರಲ್ಲಿ ಮದುವೆಯಾಗಿದ್ದ ಈ ದಂಪತಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.
ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದ ಮೇಘನಾಗೆ ಈ ಮುನ್ನ ಬೇರೆಯವರೊಂದಿಗೆ ಮದುವೆಯಾಗಿತಂತೆ. ಆದರೆ ಪತಿ ಎರಡು ವರ್ಷಗಳಿಂದ ಕಾಣೆಯಾಗಿದ್ದರಿಂದ ಮೇಘನಾಳೇ ಹೋಗಿ ಶಂಕರಣ್ಣ ಅವರನ್ನು ಮದುವೆಯಾಗಿದ್ದಾಳಂತೆ.
ಸ್ವತಃ ಮೇಘನಾ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಳು. ಆದರೆ ಮೊದಲಿಗೆ ಮದುವೆಯಾಗಲು ಒಪ್ಪದ ಶಂಕರಣ್ಣ ಕೊನೆಗೆ ಒಪ್ಪಿಕೊಂಡು ಮೇಘನಾಳನ್ನು ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು.
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ
- ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ
- ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ
- ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ