ತುಮಕೂರಲ್ಲಿ ಇಂದು ಬೆಳಗಿನ ಜವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ, ಕರ್ನಾಟಕದ ತುಮಕೂರಲ್ಲಿ ನಡೆದ ರಸ್ತೆ ಅಪಘಾತವು ಹೃದಯ ವಿದ್ರಾವಕವಾಗಿದೆ. ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.ಇದನ್ನು ಓದಿ –ಸರ್ಕಾರದ ಟ್ರಸ್ಟ್ ಗಳ ಅಧ್ಯಕ್ಷ ಸ್ಥಾನ ನಿರಾಕರಿಸಿದ ಸೂಲಿಬೆಲೆ, ಸಾಹಿತಿ ದೇರ್ಲ
ಮೃತರ ಕುಟುಂಬಕ್ಕೆ ತಲಾ ಪಿಎಂಎನ್ಆರ್ಎಫ್ ಅಡಿಯಲ್ಲಿ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ನೀಡೋದಾಗಿ ಘೋಷಣೆ ಮಾಡಿದ್ದಾರೆ.
ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ಲಾರಿ ಮತ್ತು ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ 14 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ