ತುಮಕೂರು ನಗರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಗೋವಿಂದರಾಜುಗೆ ಟಿಕೆಟ್ ಕೊಡಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ , 2 ಬಾರಿ ಕಡಿಮೆ ಅಂತರದಲ್ಲಿ ಗೋವಿಂದರಾಜು ಸೋತಿದ್ದರೂ ಅವರು ಒಳ್ಳೆಯ ಕೆಲಸ ಮಾಡಿಕೊಂಡು ಬಂದಿದ್ದಾರೆ.. ತುಮಕೂರು ನಗರ ಕ್ಷೇತ್ರದಲ್ಲಿ ಗೋವಿಂದರಾಜುಗೆ ಟಿಕೆಟ್ ಕೊಡಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ನ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಪ್ರಕಟವಾಗಲಿದೆ. ಶುಭ ಗಳಿಗೆ ಶುಭ ಮೂಹರ್ತ ನೋಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ರಾಜಕೀಯದ ಸುನಾಮಿ ಅಲೆ, ಜೆಡಿಎಸ್ ಪರವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಕೊಚ್ಚಿಹೋಗುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಫರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ವರುಣಾದಲ್ಲೂ ಕೂಡಾ ನಮ್ಮ ಅಭ್ಯರ್ಥಿ ತಯಾರಾಗಿದ್ದಾರೆ. ವರುಣದಿಂದ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರ್ತಿವಿ ಎಂದರು.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ