ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ

Team Newsnap
0 Min Read

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸಿ.ಗೌರಿಶಂಕರ್ ಅವರನ್ನು ಚುನಾವಣೆಯಿಂದ 6 ವರ್ಷಗಳ ಕಾಲ ಅನರ್ಹಗೊಳಿಸಿ ಕಲಬುರ್ಗಿ ಹೈಕೋರ್ಟ್ ಏಕಸದಸ್ಯಪೀಠ ತೀರ್ಪು ನೀಡಿದೆ.

ಚುನಾವಣೆಯಲ್ಲಿ ಅಕ್ರಮ ನಡೆಸಿದ ಕಾರಣಕ್ಕೆ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿರುವ ಏಕಸದಸ್ಯಪೀಠದ ನ್ಯಾ. ಸುನೀಲ್ ದತ್ತ್ ಯಾದವ್, ಗೌರಿಶಂಕರ್ ಅವರಿಗೆ 6 ವರ್ಷಗಳ ಕಾಲ ಚುನಾವಣೆ ಸ್ಪರ್ಧೆಯಿಂದ ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ.

ಬಿ.ಸಿ.ಗೌರಿಶಂಕರ್ ಚುನಾವಣೆ ಅಕ್ರಮ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.

Share This Article
Leave a comment