January 28, 2026

Newsnap Kannada

The World at your finger tips!

ice cream

ಮಂಡ್ಯದಲ್ಲಿ ಐಸ್‌ಕ್ರೀಂ ತಿಂದು ಅವಳಿ ಮಕ್ಕಳು ಸಾವು

Spread the love

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರು ಘಟನೆ ನಡೆದಿದೆ.

ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿರುವ ಮಕ್ಕಳು. ತಾಯಿ ಮಕ್ಕಳಿಗೆ ನಿನ್ನೆ ಮಧ್ಯಾಹ್ನ ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದು ,ನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಗ್ರಾಮದಲ್ಲಿ ಇತರ ಮಕ್ಕಳು ಕೂಡ ಐಸ್‌ಕ್ರೀಂ ‌ತಿಂದಿದ್ದು ,ಯಾರಿಗೂ ತೊಂದರೆ ಆಗಿಲ್ಲ.

ಇದುವರೆಗೂ ಅವಳಿ ಮಕ್ಕಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಶವಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು ,ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!