Trending

ನಾಯಿ ಜೊತೆ ವಾಕಿಂಗ್ ಮಾಡಲು ಕ್ರೀಡಾಂಗಣವನ್ನೇ ಖಾಲಿ ಮಾಡಿಸಿದ ಐಎಎಸ್ ದಂಪತಿ ಎತ್ತಂಗಡಿ!

ತಮ್ಮ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗಲು ಸ್ಟೇಡಿಯಂನಲ್ಲಿದ್ದ ಕ್ರೀಡಾ ಪಟುಗಳನ್ನು ಸಮಯಕ್ಕಿಂತಲೂ ಮೊದಲೇ ಹೊರಗೆ ಕಳುಹಿಸಿದ ದೆಹಲಿ ಕಂದಾಯ ವಿಭಾಗದ ಮುಖ್ಯ ಕಾರ್ಯದರ್ಶಿ ಸಂಜೀವ್ ಖಿರ್ವಾರ್ ಲಡಾಕ್ ಗೆ ಹಾಗೂ ಅವರ ಪತ್ನಿ ರಿಂಕು ದುಗ್ಗಾ ಅವರನ್ನು ಅರುಣಾಚಲ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ.

ದೆಹಲಿಯಲ್ಲಿರುವ ತ್ಯಾಗರಾಜ್ ಸ್ಟೇಡಿಯಂ ಸಂಜೆ 8 ಗಂಟೆ ವರೆಗೂ ತೆರೆದಿಡಲಾಗುತ್ತಿತ್ತು. ಆದರೆ ಇತ್ತೀಚೆಗೆ ದೆಹಲಿ ಕಂದಾಯ ವಿಭಾಗದ ಮುಖ್ಯ ಕಾರ್ಯದರ್ಶಿ ಸಂಜೀವ್ ಖಿರ್ವಾರ್ ಅವರ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗಲು ಅಭ್ಯಾಸ ನಡೆಸುತ್ತಿದ್ದ ಕ್ರೀಡಾಪಟುಗಳನ್ನು ಅವಧಿಗಿಂತಲೂ ಮುಂಚಿತವಾಗಿ ಹೊರಗೆ ಕಳುಹಿಸಲಾಗಿದೆ ಎಂದು ವರದಿಯಾಗುತ್ತಿದ್ದಂತೆ ಸಂಜೀವ್ ಖಿರ್ವಾರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಸಂಜೀವ್ ಖಿರ್ವಾರ್ ಮತ್ತು ಅವರ ಪತ್ನಿ ರಿಂಕು ದುಗ್ಗಾ ಅವರು ತ್ಯಾಗರಾಜ್ ಕ್ರೀಡಾಂಗಣದಲ್ಲಿನ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡ ಹಿನ್ನೆಲೆ , ಸಂಜೀವ್ ಖಿರ್ವಾರ್ ಅವರನ್ನು ಲಡಾಖ್‍ಗೆ ಮತ್ತು ರಿಂಕು ಧುಗ್ಗಾ ಅವರನ್ನು ಅರುಣಾಚಲ ಪ್ರದೇಶಕ್ಕೆ ಎಂಎಚ್‍ಎ ವರ್ಗಾಯಿಸಲಾಗಿದೆ.

ನಾವು ರಾತ್ರಿ 8 ರಿಂದ 8:30ರ ವರೆಗೂ ತರಬೇತಿ ನಡೆಸುತ್ತಿದ್ದೆವು. ಆದರೆ ಈ ಅಧಿಕಾರಿಯ ನಾಯಿಗೆ ವಾಕಿಂಗ್ ಕರೆದುಕೊಂಡು ಹೋಗಲು ನಮ್ಮನ್ನು ಸಂಜೆ 7 ಗಂಟೆಗೆ ಮೈದಾನದಿಂದ ಹೊರಗೆ ಹೋಗಲು ಹೇಳಿದರು ಎಂದು ಕ್ರೀಡಾ ತರಬೇತುದಾರರೊಬ್ಬರು ಆರೋಪಿಸಿದ್ದಾರೆ.

ಇದನ್ನು ಓದಿ : ಜೈಲಿನಲ್ಲೇ 90 ರುಗೆ ದಿನಗೂಲಿ ಗುಮಾಸ್ತನ ಕೆಲಸ ಆರಂಭಿಸಿದ ನವಜೋತ್ ಸಿಂಗ್ ಸಿಧು

ಈ ಬಗ್ಗೆ ಪ್ರತಿಕ್ರಿಯಿಸಿದ ಖಿರ್ವಾರ್, ನನ್ನ ಮೇಲೆ ಹೊರಿಸಿರುವ ಆರೋಪ ಶುದ್ಧ ಸುಳ್ಳು, ನಾನು ತೀರಾ ಅಪರೂಪಕ್ಕೆ ನಾಯಿಯನ್ನು ಸ್ಟೇಡಿಯಂಗೆ ಕರೆದುಕೊಂಡು ಹೋಗಿದ್ದೆ. ಆದರೆ ಇದರಿಂದ ಯಾವುದೇ ಕ್ರೀಡಾಪಟುಗಳಿಗೂ ಅಡ್ಡಿ ಪಡಿಸಿರಲಿಲ್ಲ ಎಂದಿದ್ದಾರೆ.

ಈ ಸಂಗತಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಗರದಲ್ಲಿನ ಎಲ್ಲಾ ಸರ್ಕಾರಿ ಕ್ರೀಡಾಂಗಣಗಳನ್ನು ರಾತ್ರಿ 10 ಗಂಟೆಯವರೆಗೆ ಕ್ರೀಡಾಪಟುಗಳಿಗೆ ಅಭ್ಯಾಸಕ್ಕೆ ತೆರೆದಿಡಲು ಆದೇಶಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024