ಶ್ರೀ ನಗರದಲ್ಲಿ ಇಬ್ಬರು ಪಾಕಿಸ್ತಾನಿ ಉಗ್ರರ ಹತ್ಯೆ

Team Newsnap
1 Min Read

ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ (ಎಲ್​ಇಟಿ) ಉಗ್ರ ಸಂಘಟನೆಯ ಟಾಪ್ ಕಮಾಂಡರ್​ ಸೇರಿ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಸಿಬ್ಬಂದಿ ಎನ್​ಕೌಂಟರ್​ ನಡೆಸಿ, ಹತ್ಯೆ ಮಾಡಿದೆ.

ಎಲ್​ಇಟಿ ಮತ್ತು ಭಾರತೀಯ ಸೇನೆಯ ನಡುವೆ ಶ್ರೀನಗರದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಎಲ್​ಇಟಿ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ್ಯೆ ಯಾದರು.
ನೌಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್​ ಮೈಂಡ್ ಆಗಿದ್ದ ಎಲ್​ಇಟಿ ಕಮಾಂಡರ್ ಸೈಫುಲ್ಲಾ ಭಾರತೀಯ ಸೇನೆಯ ಎನ್​ಕೌಂಟರ್​ಗೆ ಬಲಿಯಾಗಿದ್ದಾನೆ.

ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಸಿಆರ್​ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್​ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ನಲ್ಲಿ ಖಚಿತಪಡಿಸಿದ್ದಾರೆ.

Share This Article
Leave a comment